Home / ಲೇಖನ / ಇತರೆ / ವಚನ ವಿಚಾರ – ಇಲ್ಲೇ ಇದ್ದಾರೆ

ವಚನ ವಿಚಾರ – ಇಲ್ಲೇ ಇದ್ದಾರೆ

ಇದಿರೆನ್ನ ಹಳಿವವರು ಮತಿಯ ಬೆಳಗುವರು
ಮನದ ಕಾಳಿಕೆಯ ಕಳೆವವರೆನ್ನ ನಂಟರು
ದುರಾಚಾರದಲ್ಲಿ ನಡೆವವರು ಕನ್ನಡಿ ಎನಗೆ
ಹೇಯೋಪಾದಿಯ ತೋರುವವರು
ಇದು ಕಾರಣ ನಾನನ್ಯ ದೇಶಕ್ಕೆ ಹೋಗೆನು
ಸಕಳೇಶ್ವರದೇವರ ತೋರುವರೊಳರು ಇಲ್ಲಿಯೆ

[ಕಾಳಿಕೆ-ಕಲ್ಮಶ, ತೋರುವರೊಳರು-ತೋರುಬಲ್ಲಸಮರ್ಥರು]

ಸಕಲೇಶಮಾದರಸನ ವಚನ. ಬೇರೆಯ ಊರಿಗೆ ಹೋಗಿ ನೆಲೆಸುವ ಆಸೆಯಾದರೂ ಯಾಕೆ? ಬೇರೆಯ ಜನ, ಬೇರೆಯ ವಾತಾವರಣ, ಬೇರೆಯ ರೀತಿಯ ಬದುಕಿನ ಆಸೆಯಲ್ಲವೇ? ಸಕಲೇಶಮಾದರಸ ಹೇಳುವ ಈ ಮಾತು ಕೇಳಿ. ಎಲ್ಲಿ ಹೋದರೂ ನನ್ನ ಟೀಕಿಸುವವರು, ನಿಂದಿಸುವವರು ಇದ್ದೇ ಇರುತ್ತಾರೆ. ಅವರು ನನ್ನ ಮತಿಯನ್ನು ಬೆಳಗುತ್ತಾರೆ.

ಎಲ್ಲಿ ಹೋದರೂ ನನ್ನ ಆತ್ಮೀಯರಾಗುವ ನಂಟರು ಬೇಕು, ಅವರು ನನ್ನ ಮನಸ್ಸಿನ ಕಲ್ಮಶ (ಕಾಳಿಕೆ)ಯನ್ನು ಕಳೆಯುತ್ತಾರೆ. ಎಲ್ಲಿಗೆ ಹೋದರೂ ದುರಾಚಾರಿಗಳು ಇದ್ದೇ ಇರುತ್ತಾರೆ. ಅವರು ನನ್ನೊಳಗೇ ಇರುವ ಕೆಡುಕಿಗೆ ಕನ್ನಡಿ ಹಿಡಿಯುತ್ತಾರೆ. ಇಲ್ಲಿ ಇರುವ ನಿಂದಕರು, ನೆಂಟರು, ದುಷ್ಟರು ಬೇರೆ ಊರಲ್ಲಿಯೂ ಅವರೇ ಅಲ್ಲವೇ?

ನನ್ನನ್ನು ನನಗೇ ತೋರುವವರು ಇಲ್ಲೇ ಇರುವಾಗ ಅನ್ಯದೇಶಕ್ಕೆ ಹೋಗಲೊಲ್ಲೆ ಎನ್ನುತ್ತಾನೆ ಸಕಳೇಶ ಮಾದರಸ. ಎಲ್ಲಿದ್ದೇವೆ ಅನ್ನುವುದಕ್ಕಿಂತ ನಾವು ಇರುವಲ್ಲಿ ಎಂಥ ಸಂಬಂಧಗಳನ್ನು ಕಟ್ಟಿಕೊಂಡಿದ್ದೇವೆ, ಆ ಸಂಬಂಧಗಳಿಂದ ನಮ್ಮನ್ನು ನಾವು ಹೇಗೆ ಅರಿಯುತ್ತೇವೆ ಅನ್ನುವುದು ಮುಖ್ಯವಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...