Home / ಲೇಖನ / ಇತರೆ / ವಚನ ವಿಚಾರ – ಇನಿಯನಿಗೆ ತವಕವಿಲ್ಲ

ವಚನ ವಿಚಾರ – ಇನಿಯನಿಗೆ ತವಕವಿಲ್ಲ

ಇನಿಯಂಗೆ ತವಕವಿಲ್ಲ
ಎನಗೆ ಸೈರಣೆಯಿಲ್ಲ
ಮನದಿಚ್ಛೆಯನರಿವ ಸಖಿಯರಿಲ್ಲ
ಇನ್ನೇವೆನವ್ವಾ
ಮನುಮಥವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು
ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ
ದಿನ ವೃಥಾ ಹೋಯಿತ್ತಾಗಿ ಯೌವನ ಬೀಸರವಾಗದ ಮುನ್ನ
ಪಿನಾಕಿಯ ನೆರಹವ್ವಾ ಶಂಭುಜಕ್ಕೇಶ್ವರನ

[ಬೀಸರವಾಗದ ಮುನ್ನ-ವ್ಯರ್ಥವಾಗುವ ಮುನ್ನ]

ಸತ್ಯಕ್ಕನ ವಚನ. ಭಕ್ತಿ ಪ್ರೀತಿಗಳೆರಡೂ ತೀವ್ರವಾಗಿ ಬೆರೆತ ಮಾತು ಇಲ್ಲಿದೆ.
ನನ್ನ ಪ್ರೇಮಿಗೆ ನನ್ನ ಕೂಡಬೇಕೆಂಬ ತವಕ ಇಲ್ಲ, ನನಗೆ ಕಾಯುವ ಸಹನೆ ಇಲ್ಲ, ನನ್ನ ಮನಸ್ಸನ್ನು ತಿಳಿಯುವ ಗೆಳತಿಯರೂ ಇಲ್ಲ. ಏನು ಮಾಡಲಿ, ಸಹಿಸಲಾರೆ, ಅಮ್ಮಾ ನನ್ನ ಮನಸ್ಸು ಮನ್ಮಥವೈರಿಯ ಅನುಭಾವದಲ್ಲಿ ಸಿಕ್ಕಿಕೊಂಡಿದೆ, ನೀನೂ ಕರುಣೆ ಇಲ್ಲದ ತಾಯಿ, ನನ್ನ ದಿನಗಳು ವೃಥಾ ಕಳೆದು ಹೋಗುತ್ತ ನನ್ನ ಯೌವನ ವ್ಯರ್ಥವಾಗುವ ಮೊದಲು ಶಂಭುಜಕ್ಕೇಶ್ವರನೊಡನೆ ನನ್ನನ್ನು ಕೂಡಿಸು.

ಪ್ರೇಮಿಯ ವೈಚಿತ್ರ (ಅವನು ಮನ್ಮಥವೈರಿಯಾದ್ದರಿಂದಲೇ ಅವನಿಗೆ ತವಕವಿಲ್ಲ), ಸಮವಯಸ್ಕ ಗೆಳೆತಿಯರಿಲ್ಲದ ಒಂಟಿತನದ ಭಾರ, ತಾಯಿಯೊಡನೆ ಹೇಳಬಾರದ ಮಾತಾದರೂ ಅವಳಲ್ಲದೆ ಬೇರೆ ಗತಿ ಇಲ್ಲ ಎಂಬ ಅಸಹಾಯಕತೆ, ಶಂಭುಜಕ್ಕೇಶ್ವರನೊಡನೆ ನನ್ನ ಕೂಡಿಸು ಎಂದು ಮಗಳಾಗಿ ಸಂಕೋಚಬಿಟ್ಟು ಕೇಳಲೇಬೇಕೆಂಬ ಭಾವದ ಒತ್ತಡ ಇವೆಲ್ಲ ತೀವ್ರವಾದ ಕಾವ್ಯರೂಪದಲ್ಲಿ ವ್ಯಕ್ತವಾಗಿವೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...