Home / ಲೇಖನ / ಇತರೆ / ವಚನ ವಿಚಾರ – ಇನಿಯನಿಗೆ ತವಕವಿಲ್ಲ

ವಚನ ವಿಚಾರ – ಇನಿಯನಿಗೆ ತವಕವಿಲ್ಲ

ಇನಿಯಂಗೆ ತವಕವಿಲ್ಲ
ಎನಗೆ ಸೈರಣೆಯಿಲ್ಲ
ಮನದಿಚ್ಛೆಯನರಿವ ಸಖಿಯರಿಲ್ಲ
ಇನ್ನೇವೆನವ್ವಾ
ಮನುಮಥವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು
ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ
ದಿನ ವೃಥಾ ಹೋಯಿತ್ತಾಗಿ ಯೌವನ ಬೀಸರವಾಗದ ಮುನ್ನ
ಪಿನಾಕಿಯ ನೆರಹವ್ವಾ ಶಂಭುಜಕ್ಕೇಶ್ವರನ

[ಬೀಸರವಾಗದ ಮುನ್ನ-ವ್ಯರ್ಥವಾಗುವ ಮುನ್ನ]

ಸತ್ಯಕ್ಕನ ವಚನ. ಭಕ್ತಿ ಪ್ರೀತಿಗಳೆರಡೂ ತೀವ್ರವಾಗಿ ಬೆರೆತ ಮಾತು ಇಲ್ಲಿದೆ.
ನನ್ನ ಪ್ರೇಮಿಗೆ ನನ್ನ ಕೂಡಬೇಕೆಂಬ ತವಕ ಇಲ್ಲ, ನನಗೆ ಕಾಯುವ ಸಹನೆ ಇಲ್ಲ, ನನ್ನ ಮನಸ್ಸನ್ನು ತಿಳಿಯುವ ಗೆಳತಿಯರೂ ಇಲ್ಲ. ಏನು ಮಾಡಲಿ, ಸಹಿಸಲಾರೆ, ಅಮ್ಮಾ ನನ್ನ ಮನಸ್ಸು ಮನ್ಮಥವೈರಿಯ ಅನುಭಾವದಲ್ಲಿ ಸಿಕ್ಕಿಕೊಂಡಿದೆ, ನೀನೂ ಕರುಣೆ ಇಲ್ಲದ ತಾಯಿ, ನನ್ನ ದಿನಗಳು ವೃಥಾ ಕಳೆದು ಹೋಗುತ್ತ ನನ್ನ ಯೌವನ ವ್ಯರ್ಥವಾಗುವ ಮೊದಲು ಶಂಭುಜಕ್ಕೇಶ್ವರನೊಡನೆ ನನ್ನನ್ನು ಕೂಡಿಸು.

ಪ್ರೇಮಿಯ ವೈಚಿತ್ರ (ಅವನು ಮನ್ಮಥವೈರಿಯಾದ್ದರಿಂದಲೇ ಅವನಿಗೆ ತವಕವಿಲ್ಲ), ಸಮವಯಸ್ಕ ಗೆಳೆತಿಯರಿಲ್ಲದ ಒಂಟಿತನದ ಭಾರ, ತಾಯಿಯೊಡನೆ ಹೇಳಬಾರದ ಮಾತಾದರೂ ಅವಳಲ್ಲದೆ ಬೇರೆ ಗತಿ ಇಲ್ಲ ಎಂಬ ಅಸಹಾಯಕತೆ, ಶಂಭುಜಕ್ಕೇಶ್ವರನೊಡನೆ ನನ್ನ ಕೂಡಿಸು ಎಂದು ಮಗಳಾಗಿ ಸಂಕೋಚಬಿಟ್ಟು ಕೇಳಲೇಬೇಕೆಂಬ ಭಾವದ ಒತ್ತಡ ಇವೆಲ್ಲ ತೀವ್ರವಾದ ಕಾವ್ಯರೂಪದಲ್ಲಿ ವ್ಯಕ್ತವಾಗಿವೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ