Home / ಲೇಖನ / ಇತರೆ / ವಚನ ವಿಚಾರ – ಇನಿಯನಿಗೆ ತವಕವಿಲ್ಲ

ವಚನ ವಿಚಾರ – ಇನಿಯನಿಗೆ ತವಕವಿಲ್ಲ

ಇನಿಯಂಗೆ ತವಕವಿಲ್ಲ
ಎನಗೆ ಸೈರಣೆಯಿಲ್ಲ
ಮನದಿಚ್ಛೆಯನರಿವ ಸಖಿಯರಿಲ್ಲ
ಇನ್ನೇವೆನವ್ವಾ
ಮನುಮಥವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು
ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ
ದಿನ ವೃಥಾ ಹೋಯಿತ್ತಾಗಿ ಯೌವನ ಬೀಸರವಾಗದ ಮುನ್ನ
ಪಿನಾಕಿಯ ನೆರಹವ್ವಾ ಶಂಭುಜಕ್ಕೇಶ್ವರನ

[ಬೀಸರವಾಗದ ಮುನ್ನ-ವ್ಯರ್ಥವಾಗುವ ಮುನ್ನ]

ಸತ್ಯಕ್ಕನ ವಚನ. ಭಕ್ತಿ ಪ್ರೀತಿಗಳೆರಡೂ ತೀವ್ರವಾಗಿ ಬೆರೆತ ಮಾತು ಇಲ್ಲಿದೆ.
ನನ್ನ ಪ್ರೇಮಿಗೆ ನನ್ನ ಕೂಡಬೇಕೆಂಬ ತವಕ ಇಲ್ಲ, ನನಗೆ ಕಾಯುವ ಸಹನೆ ಇಲ್ಲ, ನನ್ನ ಮನಸ್ಸನ್ನು ತಿಳಿಯುವ ಗೆಳತಿಯರೂ ಇಲ್ಲ. ಏನು ಮಾಡಲಿ, ಸಹಿಸಲಾರೆ, ಅಮ್ಮಾ ನನ್ನ ಮನಸ್ಸು ಮನ್ಮಥವೈರಿಯ ಅನುಭಾವದಲ್ಲಿ ಸಿಕ್ಕಿಕೊಂಡಿದೆ, ನೀನೂ ಕರುಣೆ ಇಲ್ಲದ ತಾಯಿ, ನನ್ನ ದಿನಗಳು ವೃಥಾ ಕಳೆದು ಹೋಗುತ್ತ ನನ್ನ ಯೌವನ ವ್ಯರ್ಥವಾಗುವ ಮೊದಲು ಶಂಭುಜಕ್ಕೇಶ್ವರನೊಡನೆ ನನ್ನನ್ನು ಕೂಡಿಸು.

ಪ್ರೇಮಿಯ ವೈಚಿತ್ರ (ಅವನು ಮನ್ಮಥವೈರಿಯಾದ್ದರಿಂದಲೇ ಅವನಿಗೆ ತವಕವಿಲ್ಲ), ಸಮವಯಸ್ಕ ಗೆಳೆತಿಯರಿಲ್ಲದ ಒಂಟಿತನದ ಭಾರ, ತಾಯಿಯೊಡನೆ ಹೇಳಬಾರದ ಮಾತಾದರೂ ಅವಳಲ್ಲದೆ ಬೇರೆ ಗತಿ ಇಲ್ಲ ಎಂಬ ಅಸಹಾಯಕತೆ, ಶಂಭುಜಕ್ಕೇಶ್ವರನೊಡನೆ ನನ್ನ ಕೂಡಿಸು ಎಂದು ಮಗಳಾಗಿ ಸಂಕೋಚಬಿಟ್ಟು ಕೇಳಲೇಬೇಕೆಂಬ ಭಾವದ ಒತ್ತಡ ಇವೆಲ್ಲ ತೀವ್ರವಾದ ಕಾವ್ಯರೂಪದಲ್ಲಿ ವ್ಯಕ್ತವಾಗಿವೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...