Home / ಲೇಖನ / ಇತರೆ / ವಚನ ವಿಚಾರ – ಮನಸ್ಸು ಕೋತಿ

ವಚನ ವಿಚಾರ – ಮನಸ್ಸು ಕೋತಿ

ಇನ್ನೇವೆನಿನ್ನೇವೆನಯ್ಯಾ
ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು
ಎನ್ನ ನಿಂದಲ್ಲಿ ನಿಲಲೀಯದು
ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ
ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ
ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ
ಕೂಡಲಸಂಗಮದೇವಾ

ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ ಎಂದು ನಿಮ್ಮೊಡಗೂಡುವೆನಯ್ಯಾ

[ಇನ್ನೇವೆನಿನ್ನೇವೆ – ಐದುತ್ತಿದೆ – ಹೊಂದುತ್ತಿದೆ]

ಬಸವಣ್ಣನ ವಚನ. ಮನಸ್ಸು ಕೋತಿ. ನನ್ನ ಮನಸ್ಸು ನನ್ನ ಮೇಲೆ ಮಾಡುವ ದಾಳಿ ಘನವಾದದ್ದು. ಏನು ಮಾಡಲೆಂದು ಹೊಳೆಯುತ್ತಿಲ್ಲ. ಈ ಕ್ಷಣದಲ್ಲಿ ಆಕಾಶಕ್ಕೆ ಮರುಕ್ಷಣಕ್ಕೆ ಪಾತಾಳ, ಕ್ಷಣದಲ್ಲಿ ದಿಕ್ಕುದಿಕ್ಕಿಗೆ ನಿಂದಲ್ಲಿ ನಿಲಲು ಆಗದಿದ್ದರೆ ಕೂಡಲಸಂಗಮನೊಡನೆ ಕೂಡುವುದು ಹೇಗೆ? ಕೋತಿ ಮನಸ್ಸಿನ ದಾಳಿ ಎಂದು ನಿಲ್ಲುತ್ತದೆ. ಈ ಪ್ರಶ್ನೆ ಬಹುಶಃ ನಮ್ಮೆಲ್ಲರದೂ ಹೌದು. ಮನಸ್ಸು ಕೋತಿಯಂತೆ ಅಲ್ಲ, ಮನಸ್ಸೇ ಕೋತಿ. ಹಾಗಿದ್ದ ಮೇಲೆ ಚಪಲತೆಯೇ ಅದರ ಗುಣ. ಅದನ್ನು ಒಂದೆಡೆಯಲ್ಲಿ ಸುಮ್ಮನೆ ಇರುವಂತೆ ಮಾಡುವುದು ಅಸಾಧ್ಯ ಮತ್ತು ಅಸಹಜ.

ಆದ್ದರಿಂದಲೇ ಮನಸ್ಸನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳೂ ಸಾಧನೆಗಳೂ ವ್ಯರ್ಥ. ಕೋತಿತನದ ಬಗ್ಗೆ “ಅರಿವು” ಇಟ್ಟುಕೊಳ್ಳುವುದೊಂದೇ ನಾವು ಮಾಡಬಹುದಾದ ಕೆಲಸ. ಇಲ್ಲಿ ಇನ್ನೊಂದು ಸೂಕ್ಷ್ಮವನ್ನೂ ಗಮನಿಸಿ, ನಾನು ಬೇರೆ ನನ್ನ ಮನಸ್ಸು ಬೇರೆ, ಏನು ಮಾಡಲಿ ಎಂಬ ತಹತಹ ಇಲ್ಲಿದೆ. ಹಾಗೆ ನೋಡಿದರೆ ನಾನು ಎಂಬುದು ನನ್ನ ಮನಸ್ಸಿಗಿಂತ ಭಿನ್ನ ಅಲ್ಲವೇ ಅಲ್ಲ. “ಮನಸ್ಸಿನಲ್ಲಿ ಯೋಚನೆಗಳು ಮೂಡುತ್ತವೆ” ಎನ್ನುವುದು ತಪ್ಪು, ಯೋಚನೆಗಳ ಮೊತ್ತವೇ ಮನಸ್ಸು ಎಂಬುದು ಸರಿ. ನಾನು ಆಕಾಶದೆತ್ತರ, ನಾನು ಚದರಿ ದಿಕ್ಕಾಪಾಲು ಎಂಬ ಯೋಚನೆಗಳೇ ನನ್ನ ಮನಸ್ಸು. ನಾನು ಮತ್ತು ಮನಸ್ಸು ಬೇರೆ ಬೇರೆ ಎಂದುಕೊಂಡದ್ದರಿಂದಲೇ ಮನಸ್ಸು ನನ್ನ ಮೇಲೆ ದಾಳಿ ಮಾಡುತ್ತಿದೆ ಅನ್ನಿಸುತ್ತದೆ.

ನಾನು ಬೇರೆಯಲ್ಲ, ನನ್ನ ಮನಸ್ಸು ಬೇರೆಯಲ್ಲ ಎಂದು ತಿಳಿದಾಗ ಕೋತಿ ಮನಸ್ಸಿನ ದಾಳಿ ನಿಲ್ಲುತ್ತದೆ, ಅದು ಯಾವಾಗ ಎಂಬುದೇ ಪ್ರಶ್ನೆ. ಆದ್ದರಿಂದಲೇ “ದಾಳಿಯ ನಂದಿಗೆ ನೀಗಿ” ಎಂಬ ಮಾತು ಬಂದಿದೆ. ಮನಸ್ಸಿನ ಸ್ವರೂಪದ ಬಗ್ಗೆ ಅರಿವು ಮೂಡಿದ ಕ್ಷಣವೇ ಮನಸ್ಸಿನ ಕೋತಿತನ ಮಾಯವಾಗುತ್ತದೆ, ಕೂಡಲಸಂಗಮ ದೊರೆಯುತ್ತಾನೆ.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...