Home / ಲೇಖನ / ಇತರೆ / ವಚನ ವಿಚಾರ – ಊರ್ವಶಿ ಮತ್ತು ಹಂದಿ

ವಚನ ವಿಚಾರ – ಊರ್ವಶಿ ಮತ್ತು ಹಂದಿ

ಊರ್ವಸಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರಲ್ಲದೆ
ಹಂದಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರೆ
ಹುಡು ಹುಡು ಎಂದಟ್ಟುವರಲ್ಲದೆ
ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರಲ್ಲದೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಆ ಹಂದಿಗಿಂತ ಕರಕಷ್ಟ
ಎನ್ನಯ್ಯ ಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ

ಮೋಳಿಗೆ ಮಾರಯ್ಯನ ಹೆಂಡತಿ ಮೋಳಿಗೆ ಮಹಾದೇವಿಯ ವಚನ ಇದು. ಪಚ್ಚಕರ್ಪೂರವು ಸುಗಂಧಭರಿತ ನಿಜ. ಊರ್ವಶಿ ಕರ್ಪೂರವನ್ನು ಮೆದ್ದು ಮುದ್ದುಕೊಟ್ಟರೆ ರುಚಿ, ಅದೇ ಹಂದಿ ಕರ್ಪೂರವನ್ನು ಮೆದ್ದು ಮುತ್ತುಕೊಟ್ಟರೆ ಅಸಹ್ಯ. ವಚನಗಳೇನೋ ದೊಡ್ಡ ಮಾತುಗಳು ನಿಜ. ಆದರೆ ನಡೆ, ನುಡಿಗಳಲ್ಲಿ ಪಕ್ವವಾದವರು ಅವನ್ನು ಓದಿ, ಹೇಳಿದರೆ ಹಿತ, ಹಾಗಲ್ಲದವರು ಹೇಳಿದರೆ ಹಂದಿಗಿಂತ ಅಸಹ್ಯ ಈ ಮಾತನ್ನು ಓದುಗರ ಜವಾಬ್ದಾರಿ ಎಂದೂ ವಿವರಿಸಿಕೊಳ್ಳಬಹುದು. ಕನ್ನಡವನ್ನು ಓದಲು ಬಂದ ಮಾತ್ರಕ್ಕೆ ಕನ್ನಡದಲ್ಲಿ ಬರೆದಿರುವುದೆಲ್ಲಾ ಅರ್ಥವಾಗಬೇಕೆಂದಿಲ್ಲ. ಓದುಗರ ಮನಸ್ಸೂ ಪಕ್ವವಾಗಿದ್ದಾಗ ಓದಿದ್ದಕ್ಕೆ ಹೊಸ ಅರ್ಥ ಹೊಳೆದು ಅದನ್ನು ಅವರು ಹೇಳಿದರೆ ಕೇಳುವವರಿಗೂ ಊರ್ವಶಿಯ ಚುಂಬನದಂತೆ ಹಿತವಾಗಿರುತ್ತದೆ.

ನಮ್ಮ ಕಾಲದ ದುರಂತವೆಂದರೆ ಯಾರು ಏನೇ ಹೇಳಿದರೂ ಓದುಗರಿಗೆ ಯಾವ ಜವಾಬ್ದಾರಿಯೂ ಇಲ್ಲ, ಅರ್ಥವತ್ತಾಗಿ ಹೇಳುವುದು ಲೇಖಕರ, ಮಾತನಾಡುವವರ ಜವಾಬ್ದಾರಿ ಎಂದು ಭ್ರಮಿಸಿರುವುದು. ಕೇಳಿದ ಓದಿದ ಮಾತಿನ ಬಗ್ಗೆ ಕಟು ಟಿಪ್ಪಣಿ ಮಾಡುವ ಮೊದಲು ಓದುಗರು ತಾವು ಊರ್ವಶಿಯಂಥವರೇ ಎಂದು ಒಮ್ಮೆ ಪರಿಶೀಲಿಸಿಕೊಳ್ಳುವುದು ಒಳ್ಳೆಯದೇನೋ! ತೀರ ಇಷ್ಟು ಸಂಕುಚಿತ ಅರ್ಥದಲ್ಲಿ ಅಲ್ಲದಿದ್ದರೂ ಸ್ವೀಕರಿಸುವವರ ಯೋಗ್ಯತೆಯನ್ನು ಈ ವಚನ ಎತ್ತಿ ಹೇಳುತ್ತಿರುವುದು ಗಮನಾರ್ಹವೆಂದೇ ತೋರುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...