Home / ಲೇಖನ / ಇತರೆ / ವಚನ ವಿಚಾರ – ಊರ್ವಶಿ ಮತ್ತು ಹಂದಿ

ವಚನ ವಿಚಾರ – ಊರ್ವಶಿ ಮತ್ತು ಹಂದಿ

ಊರ್ವಸಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರಲ್ಲದೆ
ಹಂದಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರೆ
ಹುಡು ಹುಡು ಎಂದಟ್ಟುವರಲ್ಲದೆ
ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರಲ್ಲದೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಆ ಹಂದಿಗಿಂತ ಕರಕಷ್ಟ
ಎನ್ನಯ್ಯ ಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ

ಮೋಳಿಗೆ ಮಾರಯ್ಯನ ಹೆಂಡತಿ ಮೋಳಿಗೆ ಮಹಾದೇವಿಯ ವಚನ ಇದು. ಪಚ್ಚಕರ್ಪೂರವು ಸುಗಂಧಭರಿತ ನಿಜ. ಊರ್ವಶಿ ಕರ್ಪೂರವನ್ನು ಮೆದ್ದು ಮುದ್ದುಕೊಟ್ಟರೆ ರುಚಿ, ಅದೇ ಹಂದಿ ಕರ್ಪೂರವನ್ನು ಮೆದ್ದು ಮುತ್ತುಕೊಟ್ಟರೆ ಅಸಹ್ಯ. ವಚನಗಳೇನೋ ದೊಡ್ಡ ಮಾತುಗಳು ನಿಜ. ಆದರೆ ನಡೆ, ನುಡಿಗಳಲ್ಲಿ ಪಕ್ವವಾದವರು ಅವನ್ನು ಓದಿ, ಹೇಳಿದರೆ ಹಿತ, ಹಾಗಲ್ಲದವರು ಹೇಳಿದರೆ ಹಂದಿಗಿಂತ ಅಸಹ್ಯ ಈ ಮಾತನ್ನು ಓದುಗರ ಜವಾಬ್ದಾರಿ ಎಂದೂ ವಿವರಿಸಿಕೊಳ್ಳಬಹುದು. ಕನ್ನಡವನ್ನು ಓದಲು ಬಂದ ಮಾತ್ರಕ್ಕೆ ಕನ್ನಡದಲ್ಲಿ ಬರೆದಿರುವುದೆಲ್ಲಾ ಅರ್ಥವಾಗಬೇಕೆಂದಿಲ್ಲ. ಓದುಗರ ಮನಸ್ಸೂ ಪಕ್ವವಾಗಿದ್ದಾಗ ಓದಿದ್ದಕ್ಕೆ ಹೊಸ ಅರ್ಥ ಹೊಳೆದು ಅದನ್ನು ಅವರು ಹೇಳಿದರೆ ಕೇಳುವವರಿಗೂ ಊರ್ವಶಿಯ ಚುಂಬನದಂತೆ ಹಿತವಾಗಿರುತ್ತದೆ.

ನಮ್ಮ ಕಾಲದ ದುರಂತವೆಂದರೆ ಯಾರು ಏನೇ ಹೇಳಿದರೂ ಓದುಗರಿಗೆ ಯಾವ ಜವಾಬ್ದಾರಿಯೂ ಇಲ್ಲ, ಅರ್ಥವತ್ತಾಗಿ ಹೇಳುವುದು ಲೇಖಕರ, ಮಾತನಾಡುವವರ ಜವಾಬ್ದಾರಿ ಎಂದು ಭ್ರಮಿಸಿರುವುದು. ಕೇಳಿದ ಓದಿದ ಮಾತಿನ ಬಗ್ಗೆ ಕಟು ಟಿಪ್ಪಣಿ ಮಾಡುವ ಮೊದಲು ಓದುಗರು ತಾವು ಊರ್ವಶಿಯಂಥವರೇ ಎಂದು ಒಮ್ಮೆ ಪರಿಶೀಲಿಸಿಕೊಳ್ಳುವುದು ಒಳ್ಳೆಯದೇನೋ! ತೀರ ಇಷ್ಟು ಸಂಕುಚಿತ ಅರ್ಥದಲ್ಲಿ ಅಲ್ಲದಿದ್ದರೂ ಸ್ವೀಕರಿಸುವವರ ಯೋಗ್ಯತೆಯನ್ನು ಈ ವಚನ ಎತ್ತಿ ಹೇಳುತ್ತಿರುವುದು ಗಮನಾರ್ಹವೆಂದೇ ತೋರುತ್ತದೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...