Home / ಲೇಖನ / ಇತರೆ / ವಚನ ವಿಚಾರ – ಊರ್ವಶಿ ಮತ್ತು ಹಂದಿ

ವಚನ ವಿಚಾರ – ಊರ್ವಶಿ ಮತ್ತು ಹಂದಿ

ಊರ್ವಸಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರಲ್ಲದೆ
ಹಂದಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರೆ
ಹುಡು ಹುಡು ಎಂದಟ್ಟುವರಲ್ಲದೆ
ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರಲ್ಲದೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಆ ಹಂದಿಗಿಂತ ಕರಕಷ್ಟ
ಎನ್ನಯ್ಯ ಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ

ಮೋಳಿಗೆ ಮಾರಯ್ಯನ ಹೆಂಡತಿ ಮೋಳಿಗೆ ಮಹಾದೇವಿಯ ವಚನ ಇದು. ಪಚ್ಚಕರ್ಪೂರವು ಸುಗಂಧಭರಿತ ನಿಜ. ಊರ್ವಶಿ ಕರ್ಪೂರವನ್ನು ಮೆದ್ದು ಮುದ್ದುಕೊಟ್ಟರೆ ರುಚಿ, ಅದೇ ಹಂದಿ ಕರ್ಪೂರವನ್ನು ಮೆದ್ದು ಮುತ್ತುಕೊಟ್ಟರೆ ಅಸಹ್ಯ. ವಚನಗಳೇನೋ ದೊಡ್ಡ ಮಾತುಗಳು ನಿಜ. ಆದರೆ ನಡೆ, ನುಡಿಗಳಲ್ಲಿ ಪಕ್ವವಾದವರು ಅವನ್ನು ಓದಿ, ಹೇಳಿದರೆ ಹಿತ, ಹಾಗಲ್ಲದವರು ಹೇಳಿದರೆ ಹಂದಿಗಿಂತ ಅಸಹ್ಯ ಈ ಮಾತನ್ನು ಓದುಗರ ಜವಾಬ್ದಾರಿ ಎಂದೂ ವಿವರಿಸಿಕೊಳ್ಳಬಹುದು. ಕನ್ನಡವನ್ನು ಓದಲು ಬಂದ ಮಾತ್ರಕ್ಕೆ ಕನ್ನಡದಲ್ಲಿ ಬರೆದಿರುವುದೆಲ್ಲಾ ಅರ್ಥವಾಗಬೇಕೆಂದಿಲ್ಲ. ಓದುಗರ ಮನಸ್ಸೂ ಪಕ್ವವಾಗಿದ್ದಾಗ ಓದಿದ್ದಕ್ಕೆ ಹೊಸ ಅರ್ಥ ಹೊಳೆದು ಅದನ್ನು ಅವರು ಹೇಳಿದರೆ ಕೇಳುವವರಿಗೂ ಊರ್ವಶಿಯ ಚುಂಬನದಂತೆ ಹಿತವಾಗಿರುತ್ತದೆ.

ನಮ್ಮ ಕಾಲದ ದುರಂತವೆಂದರೆ ಯಾರು ಏನೇ ಹೇಳಿದರೂ ಓದುಗರಿಗೆ ಯಾವ ಜವಾಬ್ದಾರಿಯೂ ಇಲ್ಲ, ಅರ್ಥವತ್ತಾಗಿ ಹೇಳುವುದು ಲೇಖಕರ, ಮಾತನಾಡುವವರ ಜವಾಬ್ದಾರಿ ಎಂದು ಭ್ರಮಿಸಿರುವುದು. ಕೇಳಿದ ಓದಿದ ಮಾತಿನ ಬಗ್ಗೆ ಕಟು ಟಿಪ್ಪಣಿ ಮಾಡುವ ಮೊದಲು ಓದುಗರು ತಾವು ಊರ್ವಶಿಯಂಥವರೇ ಎಂದು ಒಮ್ಮೆ ಪರಿಶೀಲಿಸಿಕೊಳ್ಳುವುದು ಒಳ್ಳೆಯದೇನೋ! ತೀರ ಇಷ್ಟು ಸಂಕುಚಿತ ಅರ್ಥದಲ್ಲಿ ಅಲ್ಲದಿದ್ದರೂ ಸ್ವೀಕರಿಸುವವರ ಯೋಗ್ಯತೆಯನ್ನು ಈ ವಚನ ಎತ್ತಿ ಹೇಳುತ್ತಿರುವುದು ಗಮನಾರ್ಹವೆಂದೇ ತೋರುತ್ತದೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...