Home / ಲೇಖನ / ಇತರೆ / ವಚನ ವಿಚಾರ – ಇದು ಯಾರ ಮೈ?

ವಚನ ವಿಚಾರ – ಇದು ಯಾರ ಮೈ?

ಎನ್ನೊಡಲಾದಡೆ ಎನ್ನಿಚ್ಚೆಯಲ್ಲಿರದೆ
ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ
ಅದು ಎನ್ನೊಡಲೂ ಅಲ್ಲ
ನಿನ್ನೊಡಲೂ ಅಲ್ಲ
ಅದು ನೀ ಮಾಡಿದ ಜಗದ ಬಿನ್ನಾಣದೊಡಲು
ಕಾಣಾ
ರಾಮನಾಥ

ಜೇಡರ ದಾಸಿಮಯ್ಯನ ವಚನ. ಇದು ನನ್ನ ಮೈಯಾದರೆ ನನ್ನ ಮಾತು ಕೇಳಬೇಕು, ಕೇಳುತ್ತಿಲ್ಲ. ದೇವರೇ, ಇದು ನಿನ್ನ ಮೈಯಾದರೆ ನಿನ್ನ ಮಾತು ಕೇಳುತ್ತಿರಬೇಕು. ಕೇಳುತ್ತಿಲ್ಲವಲ್ಲಾ? ಇದು ನನ್ನ ಒಡಲೂ ಅಲ್ಲ, ನಿನ್ನ ಒಡಲೂ ಅಲ್ಲ, ಈ ಲೋಕದ ಬಿನ್ನಾಣಕ್ಕೆ ಸಿಕ್ಕಿಬಿದ್ದ ಒಡಲು.

ಜೇಡರ ದಾಸಿಮಯ್ಯನ ಈ ಮಾತು ನಮ್ಮ ವ್ಯಕ್ತಿತ್ವಗಳು ಆದರ್ಶಗಳಿಂದ ಅಲ್ಲ, ನಮ್ಮ ಸುತ್ತಲ ವಾಸ್ತವ ಪರಿಸರದಿಂದ ರೂಪುಗೊಳ್ಳುತ್ತದೆ ಅನ್ನುವ ನಿಲುವಿನಿಂದ ಮೂಡಿದಂತಿದೆ. ಬಿನ್ನಾಣ ಎಂಬ ಮಾತಿಗೆ ತೋರಿಕೆಯ ವೈಭವ, ಆಕರ್ಷಣೆ ಇತ್ಯಾದಿ ಅರ್ಥಗಳೊಂದಿಗೆ ಅದು ವಿಜ್ಞಾನ ಎಂಬ ಮಾತಿನ ತದ್ಭವವೂ ಹೌದು.

ಈ ಲೋಕದ ವ್ಯವಹಾರದ ವಿಜ್ಞಾನ ನಮ್ಮ ನಮ್ಮ ವ್ಯಕ್ತಿತ್ವಗಳನ್ನು ತಿದ್ದುತ್ತದೆ, ನಮ್ಮ ಇಚ್ಛೆ ಅಂದುಕೊಳ್ಳುವುದೂ, ದೇವರ ಕಲ್ಪನೆಯೂ ನಮಗೆ ದೊರೆತ ಜಗತ್ತಿನ ಸಂಪರ್ಕದಿಂದಲೇ ಮೂಡಿದ್ದಲ್ಲವೇ? ಹಾಗಿದ್ದರೆ ನಾವು ಹೀಗೇಕೆ ಅನ್ನುವುದಕ್ಕೆ ನಮ್ಮ ಸುತ್ತಲ ಜಗತ್ತೇ ಕಾರಣ ಎಂದೆನ್ನಬಹುದೇ?

ಆಗದೇನೋ. ಯಾಕೆಂದರೆ ಜಗತ್ತಿನ ಇಚ್ಛೆಯಂತೆ ನಡೆಯಬೇಕೆನ್ನುವ ಬಲವಂತ, ದೇವರ ಆದರ್ಶದಂತೆ ಇರಲಾಗದ ಯಾತನೆ ಇವುಗಳ ಇಬ್ಬಂದಿಯೇ ದಾಸಿಮಯ್ಯನಿಗೆ ಮುಖ್ಯವಾದಂತೆ ತೋರುತ್ತದೆ. ಇವೆಲ್ಲದರ ಮೂಲದಲ್ಲಿರುವುದು ಕೂಡ ನಾನು ಅನ್ನುವ ಕಲ್ಪನೆಯನ್ನು ವಿವರಿಸಿಕೊಳ್ಳಲಾಗದ ತೊಳಲಾಟವೇ ಇರಬಹುದು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...