Home / ಲೇಖನ / ಇತರೆ / ವಚನ ವಿಚಾರ – ಕೊಡಲಾಗದು

ವಚನ ವಿಚಾರ – ಕೊಡಲಾಗದು

ಏರಿಯ ಕಟ್ಟಬಹುದಲ್ಲದೆ ನೀರ ತುಂಬಬಹುದೆ
ಕೈದುವ ಕೊಡಬಹುದಲ್ಲದೆ ಕಲಿತನವ ಕೊಡಬಹುದೆ
ವಿವಾಹವ ಮಾಡಬಹುದಲ್ಲದೆ ಪುರುಷತನವ ಹರಸಬಹುದೆ
ಘನವ ತೋರಬಹುದಲ್ಲದೆ ನೆನಹ ನಿಲಿಸಬಹುದೆ
ಓದು ಒಕ್ಕಾಲು ಬುದ್ಧಿ ಮುಕ್ಕಾಲು ಎಂಬ ಲೋಕದ
ಗಾದೆಮಾತಿನಂತೆ
ಸದ್ಗುರುಕಾರುಣ್ಯವಾದಡೂ ಸಾಧಿಸಿದವನಿಲ್ಲ ಸಕಳೇಶ್ವರಾ

[ಕೈದು-ಆಯುಧ, ನೆನಹ-ಧ್ಯಾನವ]

ಸಕಳೇಶ ಮಾದರಸನ ವಚನ ಇದು. ಒಬ್ಬರು ಇನ್ನೊಬ್ಬರಿಗೆ ಏನು ಕೊಡಬಹುದು, ಕೊಡುವುದರ ಮಿತಿಗಳೇನು ಅನ್ನುವುದನ್ನು ಈ ವಚನ ಹೇಳುತ್ತದೆ. ಕೆರೆಗೆ ಏರಿ ಕಟ್ಟಿಸಬಹುದು ನೀರು ಬರಬೇಕು; ಕೈದು, ಅಂದರೆ ಆಯುಧ, ಕೊಡಬಹುದು, ಆದರೆ ಆಯುಧ ಹಿಡಿದು ಹೋರಾಡಬಲ್ಲ ಶೌರ್ಯ ಮಾತ್ರ ಒಳಗಿನಿಂದಲೇ ಬರಬೇಕು; ಒಳ್ಳೆಯ ಹೆಣ್ಣು ನೋಡಿ ಮದುವೆ ಮಾಡಬಹುದು, ಆದರೆ ಬಾಳುವೆ ನಡೆಸಲು ಬೇಕಾದ ಗಂಡಸುತನ, ಪೌರುಷ, ಇರಬೇಕು, ಹರಸಿದರೆ ಪೌರುಷ ಬರುವುದಿಲ್ಲ. ಮಹತ್ತಾದುದನ್ನು ತೋರಬಹುದು, ಆದರೆ ಕಂಡದ್ದು ನೆನಪು ಉಳಿಯಬೇಕಾದರೆ? ಓದಿ ತಿಳಿದದ್ದು ಕಾಲು ಭಾಗ, ಬುದ್ಧಿಯಿಂದ ಅರಿತದ್ದು ಅದಕ್ಕಿಂತ ಮೂರು ಪಟ್ಟು ಹೆಚ್ಚು. ಗುರುವಿನ ಕಾರುಣ್ಯ ದೊರೆಯಬಹುದು ಆದರೆ ಸಾಧನೆಯ ಜವಾಬ್ದಾರಿ ಮಾತ್ರ ಅವರವರದ್ದೇ.

ನಾವು ಏನಾಗುತ್ತೇವೋ ಅದಕ್ಕೆ ನಾವೇ ಜವಾಬ್ದಾರರು. ನಾವು ಹೇಗಿದ್ದೇವೋ ಅದಕ್ಕೂ ನಾವೇ ಜವಾಬ್ದಾರರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...