Home / ಲೇಖನ / ಇತರೆ / ವಚನ ವಿಚಾರ – ಕಂಡದ್ದು ಕಾಣದ್ದು

ವಚನ ವಿಚಾರ – ಕಂಡದ್ದು ಕಾಣದ್ದು

ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಹೆನೆಂದರೆ
ಸಿಕ್ಕದೆಂಬ ಬಳಲಿಕೆಯ ನೋಡಾ
ಕಂಡುದನೆ ಕಂಡು ಗುರುಪಾದವ ಹಿಡಿದಲ್ಲಿ
ಕಾಣದುದ ಕಾಣಬಹುದು ಗುಹೇಶ್ವರಾ

ಅಲ್ಲಮನ ವಚನ. ಕಂಡದ್ದನ್ನು ಬಿಟ್ಟು ಕಾಣದಿರುವುದನ್ನು ಹುಡುಕಿ ಹಿಡಿಯುತ್ತೇನೆಂದು ಹೊರಟರೆ ಸಿಕ್ಕದು ಎಂಬ ಬಳಲಿಕೆಯಷ್ಟೇ ಆಗುತ್ತದೆ. `ಕಾಣುತ್ತಿರುವುದು’ ಸಾಮಾನ್ಯವೆಂದೂ ಅರ್ಥಹೀನವೆಂದೂ ಬಗೆದು ಕಾಣದ ಸತ್ಯವನ್ನು ಹುಡುಕಿ ನಾವೆಲ್ಲ ಬಳಲುವುದೇ ಹೆಚ್ಚು. ಹೀಗೆ ಕಣ್ಣೆದುರಿಗೆ ಇರುವುದನ್ನು ಸರಿಯಾಗಿ ನೋಡದೆ ಕಾಣದ ಸತ್ಯಕ್ಕೆ ಬಳಲುವುದು ವ್ಯರ್ಥ ಅನ್ನುತ್ತಾನೆ ಅಲ್ಲಮ.

ಕಂಡುದನೆ ಕಂಡು ಅನ್ನುವಾಗ ಕಾಣು ಅನ್ನುವ ಪದದ ಸಮಗ್ರ ಅರ್ಥವನ್ನು ಮನಸ್ಸಿಗೆ ತಂದುಕೊಳ್ಳಬೇಕು. ನೋಡುವುದಕ್ಕೂ ಕಾಣುವುದಕ್ಕೂ ಇರುವ ವ್ಯತ್ಯಾಸವನ್ನೂ ಗಮನಿಸಬೇಕು. ನಾವೆಲ್ಲ ಸಾಮಾನ್ಯವಾಗಿ ಸುಮ್ಮನೆ ನೋಡುವುದೇ ಹೊರತು ಗಮನಿಸಿ ಕಾಣುವುದು ಕಡಮೆ. ಮರವೊಂದನ್ನು ಒಟ್ಟಾರೆಯಾಗಿ ಸುಮ್ಮನೆ ನೋಡುತ್ತೇವೆ, ಅದರ ರಂಬೆ, ಕೊಂಬೆ, ಟಿಸಿಲು, ಎಲೆ, ಕಾಂಡ, ತೊಗಟೆ ಇತ್ಯಾದಿಯಾಗಿ ಇರುವುದನ್ನೆಲ್ಲ ಗಮನಿಸಿ ನೋಡುವುದು ಕಡಮೆ. ಆದ್ದರಿಂದಲೇ ಕಾಣುವುದನ್ನೆ `ಕಂಡರೆ’ ಹಾಗೆ ಕಾಣಿಸಬಲ್ಲ ಗುರುವನ್ನು ಒಪ್ಪಿಕೊಂಡರೆ ಕಾಣದೆ ಇರುವುದು ಕೂಡ ಕಾಣುತ್ತದೆ ಅನ್ನುತ್ತಾನೆ.

ಕಾಣಬಲ್ಲ ಗಮನಕ್ಕೆ ಕಾಣಿಸದ ಸಂಗತಿ ಯಾವುದೂ ಇರಲಾರದು. ಬುದ್ಧಿ ಇದನ್ನು ಒಪ್ಪಿತು, ಆದರೆ ಕಾಣುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ನಮಗೆ ಅಡ್ಡಿಯಾಗಿರುವುದಾದರೂ ಏನು?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...