Home / ಲೇಖನ / ಇತರೆ / ವಚನ ವಿಚಾರ – ಕಂಡದ್ದು ಕಾಣದ್ದು

ವಚನ ವಿಚಾರ – ಕಂಡದ್ದು ಕಾಣದ್ದು

ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಹೆನೆಂದರೆ
ಸಿಕ್ಕದೆಂಬ ಬಳಲಿಕೆಯ ನೋಡಾ
ಕಂಡುದನೆ ಕಂಡು ಗುರುಪಾದವ ಹಿಡಿದಲ್ಲಿ
ಕಾಣದುದ ಕಾಣಬಹುದು ಗುಹೇಶ್ವರಾ

ಅಲ್ಲಮನ ವಚನ. ಕಂಡದ್ದನ್ನು ಬಿಟ್ಟು ಕಾಣದಿರುವುದನ್ನು ಹುಡುಕಿ ಹಿಡಿಯುತ್ತೇನೆಂದು ಹೊರಟರೆ ಸಿಕ್ಕದು ಎಂಬ ಬಳಲಿಕೆಯಷ್ಟೇ ಆಗುತ್ತದೆ. `ಕಾಣುತ್ತಿರುವುದು’ ಸಾಮಾನ್ಯವೆಂದೂ ಅರ್ಥಹೀನವೆಂದೂ ಬಗೆದು ಕಾಣದ ಸತ್ಯವನ್ನು ಹುಡುಕಿ ನಾವೆಲ್ಲ ಬಳಲುವುದೇ ಹೆಚ್ಚು. ಹೀಗೆ ಕಣ್ಣೆದುರಿಗೆ ಇರುವುದನ್ನು ಸರಿಯಾಗಿ ನೋಡದೆ ಕಾಣದ ಸತ್ಯಕ್ಕೆ ಬಳಲುವುದು ವ್ಯರ್ಥ ಅನ್ನುತ್ತಾನೆ ಅಲ್ಲಮ.

ಕಂಡುದನೆ ಕಂಡು ಅನ್ನುವಾಗ ಕಾಣು ಅನ್ನುವ ಪದದ ಸಮಗ್ರ ಅರ್ಥವನ್ನು ಮನಸ್ಸಿಗೆ ತಂದುಕೊಳ್ಳಬೇಕು. ನೋಡುವುದಕ್ಕೂ ಕಾಣುವುದಕ್ಕೂ ಇರುವ ವ್ಯತ್ಯಾಸವನ್ನೂ ಗಮನಿಸಬೇಕು. ನಾವೆಲ್ಲ ಸಾಮಾನ್ಯವಾಗಿ ಸುಮ್ಮನೆ ನೋಡುವುದೇ ಹೊರತು ಗಮನಿಸಿ ಕಾಣುವುದು ಕಡಮೆ. ಮರವೊಂದನ್ನು ಒಟ್ಟಾರೆಯಾಗಿ ಸುಮ್ಮನೆ ನೋಡುತ್ತೇವೆ, ಅದರ ರಂಬೆ, ಕೊಂಬೆ, ಟಿಸಿಲು, ಎಲೆ, ಕಾಂಡ, ತೊಗಟೆ ಇತ್ಯಾದಿಯಾಗಿ ಇರುವುದನ್ನೆಲ್ಲ ಗಮನಿಸಿ ನೋಡುವುದು ಕಡಮೆ. ಆದ್ದರಿಂದಲೇ ಕಾಣುವುದನ್ನೆ `ಕಂಡರೆ’ ಹಾಗೆ ಕಾಣಿಸಬಲ್ಲ ಗುರುವನ್ನು ಒಪ್ಪಿಕೊಂಡರೆ ಕಾಣದೆ ಇರುವುದು ಕೂಡ ಕಾಣುತ್ತದೆ ಅನ್ನುತ್ತಾನೆ.

ಕಾಣಬಲ್ಲ ಗಮನಕ್ಕೆ ಕಾಣಿಸದ ಸಂಗತಿ ಯಾವುದೂ ಇರಲಾರದು. ಬುದ್ಧಿ ಇದನ್ನು ಒಪ್ಪಿತು, ಆದರೆ ಕಾಣುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ನಮಗೆ ಅಡ್ಡಿಯಾಗಿರುವುದಾದರೂ ಏನು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...