Home / ಲೇಖನ / ಇತರೆ / ವಚನ ವಿಚಾರ – ಕಂಡದ್ದು ಕಾಣದ್ದು

ವಚನ ವಿಚಾರ – ಕಂಡದ್ದು ಕಾಣದ್ದು

ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಹೆನೆಂದರೆ
ಸಿಕ್ಕದೆಂಬ ಬಳಲಿಕೆಯ ನೋಡಾ
ಕಂಡುದನೆ ಕಂಡು ಗುರುಪಾದವ ಹಿಡಿದಲ್ಲಿ
ಕಾಣದುದ ಕಾಣಬಹುದು ಗುಹೇಶ್ವರಾ

ಅಲ್ಲಮನ ವಚನ. ಕಂಡದ್ದನ್ನು ಬಿಟ್ಟು ಕಾಣದಿರುವುದನ್ನು ಹುಡುಕಿ ಹಿಡಿಯುತ್ತೇನೆಂದು ಹೊರಟರೆ ಸಿಕ್ಕದು ಎಂಬ ಬಳಲಿಕೆಯಷ್ಟೇ ಆಗುತ್ತದೆ. `ಕಾಣುತ್ತಿರುವುದು’ ಸಾಮಾನ್ಯವೆಂದೂ ಅರ್ಥಹೀನವೆಂದೂ ಬಗೆದು ಕಾಣದ ಸತ್ಯವನ್ನು ಹುಡುಕಿ ನಾವೆಲ್ಲ ಬಳಲುವುದೇ ಹೆಚ್ಚು. ಹೀಗೆ ಕಣ್ಣೆದುರಿಗೆ ಇರುವುದನ್ನು ಸರಿಯಾಗಿ ನೋಡದೆ ಕಾಣದ ಸತ್ಯಕ್ಕೆ ಬಳಲುವುದು ವ್ಯರ್ಥ ಅನ್ನುತ್ತಾನೆ ಅಲ್ಲಮ.

ಕಂಡುದನೆ ಕಂಡು ಅನ್ನುವಾಗ ಕಾಣು ಅನ್ನುವ ಪದದ ಸಮಗ್ರ ಅರ್ಥವನ್ನು ಮನಸ್ಸಿಗೆ ತಂದುಕೊಳ್ಳಬೇಕು. ನೋಡುವುದಕ್ಕೂ ಕಾಣುವುದಕ್ಕೂ ಇರುವ ವ್ಯತ್ಯಾಸವನ್ನೂ ಗಮನಿಸಬೇಕು. ನಾವೆಲ್ಲ ಸಾಮಾನ್ಯವಾಗಿ ಸುಮ್ಮನೆ ನೋಡುವುದೇ ಹೊರತು ಗಮನಿಸಿ ಕಾಣುವುದು ಕಡಮೆ. ಮರವೊಂದನ್ನು ಒಟ್ಟಾರೆಯಾಗಿ ಸುಮ್ಮನೆ ನೋಡುತ್ತೇವೆ, ಅದರ ರಂಬೆ, ಕೊಂಬೆ, ಟಿಸಿಲು, ಎಲೆ, ಕಾಂಡ, ತೊಗಟೆ ಇತ್ಯಾದಿಯಾಗಿ ಇರುವುದನ್ನೆಲ್ಲ ಗಮನಿಸಿ ನೋಡುವುದು ಕಡಮೆ. ಆದ್ದರಿಂದಲೇ ಕಾಣುವುದನ್ನೆ `ಕಂಡರೆ’ ಹಾಗೆ ಕಾಣಿಸಬಲ್ಲ ಗುರುವನ್ನು ಒಪ್ಪಿಕೊಂಡರೆ ಕಾಣದೆ ಇರುವುದು ಕೂಡ ಕಾಣುತ್ತದೆ ಅನ್ನುತ್ತಾನೆ.

ಕಾಣಬಲ್ಲ ಗಮನಕ್ಕೆ ಕಾಣಿಸದ ಸಂಗತಿ ಯಾವುದೂ ಇರಲಾರದು. ಬುದ್ಧಿ ಇದನ್ನು ಒಪ್ಪಿತು, ಆದರೆ ಕಾಣುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ನಮಗೆ ಅಡ್ಡಿಯಾಗಿರುವುದಾದರೂ ಏನು?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...