Home / ಲೇಖನ / ಇತರೆ / ವಚನ ವಿಚಾರ – ಕಂಡದ್ದು ಕಾಣದ್ದು

ವಚನ ವಿಚಾರ – ಕಂಡದ್ದು ಕಾಣದ್ದು

ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಹೆನೆಂದರೆ
ಸಿಕ್ಕದೆಂಬ ಬಳಲಿಕೆಯ ನೋಡಾ
ಕಂಡುದನೆ ಕಂಡು ಗುರುಪಾದವ ಹಿಡಿದಲ್ಲಿ
ಕಾಣದುದ ಕಾಣಬಹುದು ಗುಹೇಶ್ವರಾ

ಅಲ್ಲಮನ ವಚನ. ಕಂಡದ್ದನ್ನು ಬಿಟ್ಟು ಕಾಣದಿರುವುದನ್ನು ಹುಡುಕಿ ಹಿಡಿಯುತ್ತೇನೆಂದು ಹೊರಟರೆ ಸಿಕ್ಕದು ಎಂಬ ಬಳಲಿಕೆಯಷ್ಟೇ ಆಗುತ್ತದೆ. `ಕಾಣುತ್ತಿರುವುದು’ ಸಾಮಾನ್ಯವೆಂದೂ ಅರ್ಥಹೀನವೆಂದೂ ಬಗೆದು ಕಾಣದ ಸತ್ಯವನ್ನು ಹುಡುಕಿ ನಾವೆಲ್ಲ ಬಳಲುವುದೇ ಹೆಚ್ಚು. ಹೀಗೆ ಕಣ್ಣೆದುರಿಗೆ ಇರುವುದನ್ನು ಸರಿಯಾಗಿ ನೋಡದೆ ಕಾಣದ ಸತ್ಯಕ್ಕೆ ಬಳಲುವುದು ವ್ಯರ್ಥ ಅನ್ನುತ್ತಾನೆ ಅಲ್ಲಮ.

ಕಂಡುದನೆ ಕಂಡು ಅನ್ನುವಾಗ ಕಾಣು ಅನ್ನುವ ಪದದ ಸಮಗ್ರ ಅರ್ಥವನ್ನು ಮನಸ್ಸಿಗೆ ತಂದುಕೊಳ್ಳಬೇಕು. ನೋಡುವುದಕ್ಕೂ ಕಾಣುವುದಕ್ಕೂ ಇರುವ ವ್ಯತ್ಯಾಸವನ್ನೂ ಗಮನಿಸಬೇಕು. ನಾವೆಲ್ಲ ಸಾಮಾನ್ಯವಾಗಿ ಸುಮ್ಮನೆ ನೋಡುವುದೇ ಹೊರತು ಗಮನಿಸಿ ಕಾಣುವುದು ಕಡಮೆ. ಮರವೊಂದನ್ನು ಒಟ್ಟಾರೆಯಾಗಿ ಸುಮ್ಮನೆ ನೋಡುತ್ತೇವೆ, ಅದರ ರಂಬೆ, ಕೊಂಬೆ, ಟಿಸಿಲು, ಎಲೆ, ಕಾಂಡ, ತೊಗಟೆ ಇತ್ಯಾದಿಯಾಗಿ ಇರುವುದನ್ನೆಲ್ಲ ಗಮನಿಸಿ ನೋಡುವುದು ಕಡಮೆ. ಆದ್ದರಿಂದಲೇ ಕಾಣುವುದನ್ನೆ `ಕಂಡರೆ’ ಹಾಗೆ ಕಾಣಿಸಬಲ್ಲ ಗುರುವನ್ನು ಒಪ್ಪಿಕೊಂಡರೆ ಕಾಣದೆ ಇರುವುದು ಕೂಡ ಕಾಣುತ್ತದೆ ಅನ್ನುತ್ತಾನೆ.

ಕಾಣಬಲ್ಲ ಗಮನಕ್ಕೆ ಕಾಣಿಸದ ಸಂಗತಿ ಯಾವುದೂ ಇರಲಾರದು. ಬುದ್ಧಿ ಇದನ್ನು ಒಪ್ಪಿತು, ಆದರೆ ಕಾಣುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ನಮಗೆ ಅಡ್ಡಿಯಾಗಿರುವುದಾದರೂ ಏನು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...