Home / ಲೇಖನ / ಇತರೆ / ವಚನ ವಿಚಾರ – ಕಂಡದ್ದು ಕಾಣದ್ದು

ವಚನ ವಿಚಾರ – ಕಂಡದ್ದು ಕಾಣದ್ದು

ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಹೆನೆಂದರೆ
ಸಿಕ್ಕದೆಂಬ ಬಳಲಿಕೆಯ ನೋಡಾ
ಕಂಡುದನೆ ಕಂಡು ಗುರುಪಾದವ ಹಿಡಿದಲ್ಲಿ
ಕಾಣದುದ ಕಾಣಬಹುದು ಗುಹೇಶ್ವರಾ

ಅಲ್ಲಮನ ವಚನ. ಕಂಡದ್ದನ್ನು ಬಿಟ್ಟು ಕಾಣದಿರುವುದನ್ನು ಹುಡುಕಿ ಹಿಡಿಯುತ್ತೇನೆಂದು ಹೊರಟರೆ ಸಿಕ್ಕದು ಎಂಬ ಬಳಲಿಕೆಯಷ್ಟೇ ಆಗುತ್ತದೆ. `ಕಾಣುತ್ತಿರುವುದು’ ಸಾಮಾನ್ಯವೆಂದೂ ಅರ್ಥಹೀನವೆಂದೂ ಬಗೆದು ಕಾಣದ ಸತ್ಯವನ್ನು ಹುಡುಕಿ ನಾವೆಲ್ಲ ಬಳಲುವುದೇ ಹೆಚ್ಚು. ಹೀಗೆ ಕಣ್ಣೆದುರಿಗೆ ಇರುವುದನ್ನು ಸರಿಯಾಗಿ ನೋಡದೆ ಕಾಣದ ಸತ್ಯಕ್ಕೆ ಬಳಲುವುದು ವ್ಯರ್ಥ ಅನ್ನುತ್ತಾನೆ ಅಲ್ಲಮ.

ಕಂಡುದನೆ ಕಂಡು ಅನ್ನುವಾಗ ಕಾಣು ಅನ್ನುವ ಪದದ ಸಮಗ್ರ ಅರ್ಥವನ್ನು ಮನಸ್ಸಿಗೆ ತಂದುಕೊಳ್ಳಬೇಕು. ನೋಡುವುದಕ್ಕೂ ಕಾಣುವುದಕ್ಕೂ ಇರುವ ವ್ಯತ್ಯಾಸವನ್ನೂ ಗಮನಿಸಬೇಕು. ನಾವೆಲ್ಲ ಸಾಮಾನ್ಯವಾಗಿ ಸುಮ್ಮನೆ ನೋಡುವುದೇ ಹೊರತು ಗಮನಿಸಿ ಕಾಣುವುದು ಕಡಮೆ. ಮರವೊಂದನ್ನು ಒಟ್ಟಾರೆಯಾಗಿ ಸುಮ್ಮನೆ ನೋಡುತ್ತೇವೆ, ಅದರ ರಂಬೆ, ಕೊಂಬೆ, ಟಿಸಿಲು, ಎಲೆ, ಕಾಂಡ, ತೊಗಟೆ ಇತ್ಯಾದಿಯಾಗಿ ಇರುವುದನ್ನೆಲ್ಲ ಗಮನಿಸಿ ನೋಡುವುದು ಕಡಮೆ. ಆದ್ದರಿಂದಲೇ ಕಾಣುವುದನ್ನೆ `ಕಂಡರೆ’ ಹಾಗೆ ಕಾಣಿಸಬಲ್ಲ ಗುರುವನ್ನು ಒಪ್ಪಿಕೊಂಡರೆ ಕಾಣದೆ ಇರುವುದು ಕೂಡ ಕಾಣುತ್ತದೆ ಅನ್ನುತ್ತಾನೆ.

ಕಾಣಬಲ್ಲ ಗಮನಕ್ಕೆ ಕಾಣಿಸದ ಸಂಗತಿ ಯಾವುದೂ ಇರಲಾರದು. ಬುದ್ಧಿ ಇದನ್ನು ಒಪ್ಪಿತು, ಆದರೆ ಕಾಣುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ನಮಗೆ ಅಡ್ಡಿಯಾಗಿರುವುದಾದರೂ ಏನು?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...