Home / ಲೇಖನ / ಇತರೆ / ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ಕಚ್ಚುವ ಹಾವ ಹಿಡಿವುದಕ್ಕೆ ಗಾರುಡವ ಕಲಿಸಿದುದಿಲ್ಲ
ಕುತ್ತುವ ಹಸುವಿನ ಕೊಂಬ ಹಿಡಿಯ ಕಲಿಸಿದುದಿಲ್ಲ
ಇದು ನಿನಗೆ ದಿಂಡೆಯತನವೊ
ನಿರಂಗ ನಿಃಕಳಂಕ ಮಲ್ಲಿಕಾರ್ಜುನಾ

[ಗಾರುಡ-ಹಾವಿನ ವಿಷವನ್ನು ಇಲ್ಲವಾಗಿಸುವ ಗರುಡ ಮಂತ್ರ, ದಿಂಡೆ-ಬಂಡೆ, ಮರದ ಬೊಡ್ಡೆ, ರೂಕ್ಷತೆ, ತುಂಟತನ]

ಮೋಳಿಗೆ ಮಾರಯ್ಯನ ವಚನ. ಮನುಷ್ಯನನ್ನು ದೇವರೇ ಸೃಷ್ಟಿಮಾಡಿದ ಎಂದುಕೊಂಡರೆ ಅವನು ಏನೇನನ್ನೂ ಕಲಿಸದೆ ನಮ್ಮನ್ನೆಲ್ಲ ಸೃಷ್ಟಿಮಾಡಿ ಭೂಮಿಗೆ ಕಳುಹಿಸಿಬಿಟ್ಟಿದ್ದಾನೆ. ಕಚ್ಚಲು ಬರುವ ಹಾವನ್ನು ಪಳಗಿಸಲು ಗರುಡ ಮಂತ್ರ ಕಲಿಸಲಿಲ್ಲ, ತಿವಿಯಲು ಬರುವ ಹಸುವಿನ ಕೊಂಬು ಹಿಡಿದು ಬಗ್ಗಿಸಲು ಕಲಿಸಲಿಲ್ಲ. ಹೀಗೆ ಬದುಕಲು ಅಗತ್ಯವಾದ ವಿದ್ಯೆ ಕಲಿಸದೆ ಇದ್ದದ್ದು ದೇವರ ದಿಂಡಿಗತನವೋ? ದಿಣ್ಣೆ ಎಂಬ ಮಾತಿಗೆ ಬಂಡೆ, ಮರದ ಬೊಡ್ಡೆ ಅನ್ನುವ ಅರ್ಥಗಳಲ್ಲದೆ ರೂಕ್ಷತೆ, ತುಂಟತನ ಅನ್ನುವ ಅರ್ಥಗಳೂ ಇವೆ.

ಕೇಡಿನಿಂದ ಪಾರಾಗುವುದು, ಕೇಡನ್ನು ಪಳಗಿಸುವುದು ಇದೇ ನಾವು ಕಲಿಯಬೇಕಾದದ್ದು, ದೇವರು ನಮಗೆ ಕಲಿಸದೆ ಇರುವುದು! ದೇವರು ನಿರಂಗ, ಅಂಗವಿಲ್ಲದವನು. ಬಂಡೆಯಂತೆ ಇರುವವನು. ಅವನಿಗೆ ಒಳಿತು, ಕೆಡುಕು ಎರಡೂ ಇಲ್ಲ. ಕಲಿಸಬೇಕಾದುದನ್ನು ಕಲಿಸದೆ, ನೀವೇ ಕಲಿತುಕೊಳ್ಳಿ ಎಂದು ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ತುಂಟನಂತೆ ಸುಮ್ಮನೆ ಇದ್ದಾನೆ!
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...