Home / ಲೇಖನ / ಇತರೆ / ವಚನ ವಿಚಾರ – ಕಿರಿದು ಹಿರಿದು

ವಚನ ವಿಚಾರ – ಕಿರಿದು ಹಿರಿದು

ಕರಿ ಘನ ಅಂಕುಶ ಕಿರಿದೆನ್ನಬಹುದೆ
ಬಾರದಯ್ಯಾ
ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ
ಬಾರದಯ್ಯಾ
ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ
ಬಾರದಯ್ಯಾ
ಕೂಡಲಸಂಗಮದೇವಾ

[ಕರಿ-ಆನೆ, ಘನ-ದೊಡ್ಡದು, ತಮಂಧ-ಕತ್ತಲು]

ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನು ಗಮನಿಸುವಷ್ಟು ಸುಲಭವಾಗಿ ಸೂಕ್ಷ್ಮವಾದದ್ದನ್ನು ಗಮನಿಸಲಾರದು. ದೊಡ್ಡ ಆನೆ ಕಣ್ಣಿಗೆ ಕಾಣುತ್ತದೆ, ಅದನ್ನು ನಿಯಂತ್ರಿಸುವ ಅಂಕುಶ ಕಾಣುವುದಿಲ್ಲ. ದಟ್ಟವಾದ ಕತ್ತಲು ಮಾತ್ರವೇ ಮುಖ್ಯವಾಗುತ್ತ ಸ್ವಲ್ಪವಾದರೂ ಬೆಳಕು ನೀಡುವ ಹಣತೆ ಗಮನಕ್ಕೆ ಬರುವುದಿಲ್ಲ. ಆಯಾ ಕ್ಷಣದ ಬದುಕಿನ ಜಂಜಡವೇ ಘನವಾಗಿ ಕಾಣುತ್ತ, ಅಂಥ ಜಂಜಡದ ನಡುವೆಯೂ ಉದಾತ್ತವಾದದ್ದನ್ನು ನೆನೆಯಬಲ್ಲ ಮನಸ್ಸು ಗಮನಕ್ಕೆ ಬರುವುದಿಲ್ಲ.

ಮನಸ್ಸು ಮುಖ್ಯವಲ್ಲ, ಮನಸ್ಸಿಗೆ ಇರುವ ಸಾಧ್ಯತೆಗಳು ಮುಖ್ಯವಲ್ಲ, ಮುಖ್ಯವಾದದ್ದು ಏನಿದ್ದರೂ ಸ್ಥೂಲವಾಗಿ ಎಲ್ಲರಿಗೆ ಎದ್ದು ಕಾಣುವಂಥ ಸಂಗತಿಗಳು ಅಷ್ಟೇ ಎಂಬ ಮನೋಧರ್ಮ ನಮ್ಮ ಕಾಲದಲ್ಲಿ ಪ್ರಬಲಿಸುತ್ತಿದೆ. ಆನೆಯ ಅಪಾರವೆನ್ನಿಸುವ ಶಕ್ತಿಯನ್ನು ನಿಯಂತ್ರಿಸುವುದು ಪುಟ್ಟದೆಂದು ತೋರುವ ಅಂಕುಶ. ಕತ್ತಲೆಯನ್ನು ಕರಗಿಸುವುದು ಪುಟ್ಟ ಹಣತೆ. ಮನಸ್ಸು ಅಂಕುಶವೂ ಹೌದು ಬೆಳಕೂ ಹೌದು. ವ್ಯಕ್ತಿಯ ಮತ್ತು ಸಮಾಜದ ದುರಂತಕ್ಕೆ ಕಾರಣವಾಗಬಹುದಾದ ಮರವೆಯನ್ನು ತೊಲಗಿಸುವ ಶಕ್ತಿಯೂ ಹೌದು. ಮನಸ್ಸನ್ನು ಕಿರಿದು ಎಂದು ತಿಳಿದರೆ ನಮ್ಮ ದೊಡ್ಡ ದೊಡ್ಡ ಸಾಧನೆಗಳೆಲ್ಲವೂ ಅರ್ಥಹೀನವಾಗುತ್ತವೆ.

ಈ ವಚನದಲ್ಲಿ ಬಂದಿರುವ `ನಿಮ್ಮ ನೆನೆವ ಮನ’ ಎಂಬ ಮಾತನ್ನು ಬೇರೆ ರೀತಿಯಲ್ಲೂ ಅರ್ಥ ಮಾಡಿಕೊಳ್ಳಬಹುದು. ನಮ್ಮ ಮನಸ್ಸು ಸಾಮಾನ್ಯವಾಗಿ ಕೇವಲ ನಮ್ಮ ಬಗ್ಗೆಯೇ ಯೋಚಿಸುತ್ತಿರುತ್ತದೆ. ನಮ್ಮ ಎಲ್ಲ ಚಿಂತನೆಗಳ ಕೇಂದ್ರ ನಾವೇ! ನಾನು ಎಂಬುದನ್ನು ಬಿಟ್ಟು ಕ್ಷಣಕಾಲವಾದರೂ ನೀನು ಎಂಬುದನ್ನು ಅಂದರೆ ಇನ್ನೊಬ್ಬ ವ್ಯಕ್ತಿ, ಜನಸಮುದಾಯ, ಲೋಕ, ದೇವರು ಇತ್ಯಾದಿ, ಆಲೋಚಿಸ ಬಲ್ಲ ಅರಿಯಬಲ್ಲ ಮನಸ್ಸು ಮಾತ್ರವೇ ಘನವಾಗಬಲ್ಲುದು. ಹಾಗೆ ಆಗುವುದಕ್ಕೂ ಸೂಕ್ಷ್ಮವಾದ ನಮ್ಮ ಮನಸ್ಸಿನ ಬಗ್ಗೆಯೇ ನಮಗೆ ಎಚ್ಚರ ಮೂಡಬೇಕು ಅಲ್ಲವೆ!
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...