Home / ಲೇಖನ / ಇತರೆ / ವಚನ ವಿಚಾರ – ಕಿರಿದು ಹಿರಿದು

ವಚನ ವಿಚಾರ – ಕಿರಿದು ಹಿರಿದು

ಕರಿ ಘನ ಅಂಕುಶ ಕಿರಿದೆನ್ನಬಹುದೆ
ಬಾರದಯ್ಯಾ
ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ
ಬಾರದಯ್ಯಾ
ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ
ಬಾರದಯ್ಯಾ
ಕೂಡಲಸಂಗಮದೇವಾ

[ಕರಿ-ಆನೆ, ಘನ-ದೊಡ್ಡದು, ತಮಂಧ-ಕತ್ತಲು]

ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನು ಗಮನಿಸುವಷ್ಟು ಸುಲಭವಾಗಿ ಸೂಕ್ಷ್ಮವಾದದ್ದನ್ನು ಗಮನಿಸಲಾರದು. ದೊಡ್ಡ ಆನೆ ಕಣ್ಣಿಗೆ ಕಾಣುತ್ತದೆ, ಅದನ್ನು ನಿಯಂತ್ರಿಸುವ ಅಂಕುಶ ಕಾಣುವುದಿಲ್ಲ. ದಟ್ಟವಾದ ಕತ್ತಲು ಮಾತ್ರವೇ ಮುಖ್ಯವಾಗುತ್ತ ಸ್ವಲ್ಪವಾದರೂ ಬೆಳಕು ನೀಡುವ ಹಣತೆ ಗಮನಕ್ಕೆ ಬರುವುದಿಲ್ಲ. ಆಯಾ ಕ್ಷಣದ ಬದುಕಿನ ಜಂಜಡವೇ ಘನವಾಗಿ ಕಾಣುತ್ತ, ಅಂಥ ಜಂಜಡದ ನಡುವೆಯೂ ಉದಾತ್ತವಾದದ್ದನ್ನು ನೆನೆಯಬಲ್ಲ ಮನಸ್ಸು ಗಮನಕ್ಕೆ ಬರುವುದಿಲ್ಲ.

ಮನಸ್ಸು ಮುಖ್ಯವಲ್ಲ, ಮನಸ್ಸಿಗೆ ಇರುವ ಸಾಧ್ಯತೆಗಳು ಮುಖ್ಯವಲ್ಲ, ಮುಖ್ಯವಾದದ್ದು ಏನಿದ್ದರೂ ಸ್ಥೂಲವಾಗಿ ಎಲ್ಲರಿಗೆ ಎದ್ದು ಕಾಣುವಂಥ ಸಂಗತಿಗಳು ಅಷ್ಟೇ ಎಂಬ ಮನೋಧರ್ಮ ನಮ್ಮ ಕಾಲದಲ್ಲಿ ಪ್ರಬಲಿಸುತ್ತಿದೆ. ಆನೆಯ ಅಪಾರವೆನ್ನಿಸುವ ಶಕ್ತಿಯನ್ನು ನಿಯಂತ್ರಿಸುವುದು ಪುಟ್ಟದೆಂದು ತೋರುವ ಅಂಕುಶ. ಕತ್ತಲೆಯನ್ನು ಕರಗಿಸುವುದು ಪುಟ್ಟ ಹಣತೆ. ಮನಸ್ಸು ಅಂಕುಶವೂ ಹೌದು ಬೆಳಕೂ ಹೌದು. ವ್ಯಕ್ತಿಯ ಮತ್ತು ಸಮಾಜದ ದುರಂತಕ್ಕೆ ಕಾರಣವಾಗಬಹುದಾದ ಮರವೆಯನ್ನು ತೊಲಗಿಸುವ ಶಕ್ತಿಯೂ ಹೌದು. ಮನಸ್ಸನ್ನು ಕಿರಿದು ಎಂದು ತಿಳಿದರೆ ನಮ್ಮ ದೊಡ್ಡ ದೊಡ್ಡ ಸಾಧನೆಗಳೆಲ್ಲವೂ ಅರ್ಥಹೀನವಾಗುತ್ತವೆ.

ಈ ವಚನದಲ್ಲಿ ಬಂದಿರುವ `ನಿಮ್ಮ ನೆನೆವ ಮನ’ ಎಂಬ ಮಾತನ್ನು ಬೇರೆ ರೀತಿಯಲ್ಲೂ ಅರ್ಥ ಮಾಡಿಕೊಳ್ಳಬಹುದು. ನಮ್ಮ ಮನಸ್ಸು ಸಾಮಾನ್ಯವಾಗಿ ಕೇವಲ ನಮ್ಮ ಬಗ್ಗೆಯೇ ಯೋಚಿಸುತ್ತಿರುತ್ತದೆ. ನಮ್ಮ ಎಲ್ಲ ಚಿಂತನೆಗಳ ಕೇಂದ್ರ ನಾವೇ! ನಾನು ಎಂಬುದನ್ನು ಬಿಟ್ಟು ಕ್ಷಣಕಾಲವಾದರೂ ನೀನು ಎಂಬುದನ್ನು ಅಂದರೆ ಇನ್ನೊಬ್ಬ ವ್ಯಕ್ತಿ, ಜನಸಮುದಾಯ, ಲೋಕ, ದೇವರು ಇತ್ಯಾದಿ, ಆಲೋಚಿಸ ಬಲ್ಲ ಅರಿಯಬಲ್ಲ ಮನಸ್ಸು ಮಾತ್ರವೇ ಘನವಾಗಬಲ್ಲುದು. ಹಾಗೆ ಆಗುವುದಕ್ಕೂ ಸೂಕ್ಷ್ಮವಾದ ನಮ್ಮ ಮನಸ್ಸಿನ ಬಗ್ಗೆಯೇ ನಮಗೆ ಎಚ್ಚರ ಮೂಡಬೇಕು ಅಲ್ಲವೆ!
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...