Home / ಲೇಖನ / ಇತರೆ / ವಚನ ವಿಚಾರ – ಕಿರಿದು ಹಿರಿದು

ವಚನ ವಿಚಾರ – ಕಿರಿದು ಹಿರಿದು

ಕರಿ ಘನ ಅಂಕುಶ ಕಿರಿದೆನ್ನಬಹುದೆ
ಬಾರದಯ್ಯಾ
ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ
ಬಾರದಯ್ಯಾ
ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ
ಬಾರದಯ್ಯಾ
ಕೂಡಲಸಂಗಮದೇವಾ

[ಕರಿ-ಆನೆ, ಘನ-ದೊಡ್ಡದು, ತಮಂಧ-ಕತ್ತಲು]

ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನು ಗಮನಿಸುವಷ್ಟು ಸುಲಭವಾಗಿ ಸೂಕ್ಷ್ಮವಾದದ್ದನ್ನು ಗಮನಿಸಲಾರದು. ದೊಡ್ಡ ಆನೆ ಕಣ್ಣಿಗೆ ಕಾಣುತ್ತದೆ, ಅದನ್ನು ನಿಯಂತ್ರಿಸುವ ಅಂಕುಶ ಕಾಣುವುದಿಲ್ಲ. ದಟ್ಟವಾದ ಕತ್ತಲು ಮಾತ್ರವೇ ಮುಖ್ಯವಾಗುತ್ತ ಸ್ವಲ್ಪವಾದರೂ ಬೆಳಕು ನೀಡುವ ಹಣತೆ ಗಮನಕ್ಕೆ ಬರುವುದಿಲ್ಲ. ಆಯಾ ಕ್ಷಣದ ಬದುಕಿನ ಜಂಜಡವೇ ಘನವಾಗಿ ಕಾಣುತ್ತ, ಅಂಥ ಜಂಜಡದ ನಡುವೆಯೂ ಉದಾತ್ತವಾದದ್ದನ್ನು ನೆನೆಯಬಲ್ಲ ಮನಸ್ಸು ಗಮನಕ್ಕೆ ಬರುವುದಿಲ್ಲ.

ಮನಸ್ಸು ಮುಖ್ಯವಲ್ಲ, ಮನಸ್ಸಿಗೆ ಇರುವ ಸಾಧ್ಯತೆಗಳು ಮುಖ್ಯವಲ್ಲ, ಮುಖ್ಯವಾದದ್ದು ಏನಿದ್ದರೂ ಸ್ಥೂಲವಾಗಿ ಎಲ್ಲರಿಗೆ ಎದ್ದು ಕಾಣುವಂಥ ಸಂಗತಿಗಳು ಅಷ್ಟೇ ಎಂಬ ಮನೋಧರ್ಮ ನಮ್ಮ ಕಾಲದಲ್ಲಿ ಪ್ರಬಲಿಸುತ್ತಿದೆ. ಆನೆಯ ಅಪಾರವೆನ್ನಿಸುವ ಶಕ್ತಿಯನ್ನು ನಿಯಂತ್ರಿಸುವುದು ಪುಟ್ಟದೆಂದು ತೋರುವ ಅಂಕುಶ. ಕತ್ತಲೆಯನ್ನು ಕರಗಿಸುವುದು ಪುಟ್ಟ ಹಣತೆ. ಮನಸ್ಸು ಅಂಕುಶವೂ ಹೌದು ಬೆಳಕೂ ಹೌದು. ವ್ಯಕ್ತಿಯ ಮತ್ತು ಸಮಾಜದ ದುರಂತಕ್ಕೆ ಕಾರಣವಾಗಬಹುದಾದ ಮರವೆಯನ್ನು ತೊಲಗಿಸುವ ಶಕ್ತಿಯೂ ಹೌದು. ಮನಸ್ಸನ್ನು ಕಿರಿದು ಎಂದು ತಿಳಿದರೆ ನಮ್ಮ ದೊಡ್ಡ ದೊಡ್ಡ ಸಾಧನೆಗಳೆಲ್ಲವೂ ಅರ್ಥಹೀನವಾಗುತ್ತವೆ.

ಈ ವಚನದಲ್ಲಿ ಬಂದಿರುವ `ನಿಮ್ಮ ನೆನೆವ ಮನ’ ಎಂಬ ಮಾತನ್ನು ಬೇರೆ ರೀತಿಯಲ್ಲೂ ಅರ್ಥ ಮಾಡಿಕೊಳ್ಳಬಹುದು. ನಮ್ಮ ಮನಸ್ಸು ಸಾಮಾನ್ಯವಾಗಿ ಕೇವಲ ನಮ್ಮ ಬಗ್ಗೆಯೇ ಯೋಚಿಸುತ್ತಿರುತ್ತದೆ. ನಮ್ಮ ಎಲ್ಲ ಚಿಂತನೆಗಳ ಕೇಂದ್ರ ನಾವೇ! ನಾನು ಎಂಬುದನ್ನು ಬಿಟ್ಟು ಕ್ಷಣಕಾಲವಾದರೂ ನೀನು ಎಂಬುದನ್ನು ಅಂದರೆ ಇನ್ನೊಬ್ಬ ವ್ಯಕ್ತಿ, ಜನಸಮುದಾಯ, ಲೋಕ, ದೇವರು ಇತ್ಯಾದಿ, ಆಲೋಚಿಸ ಬಲ್ಲ ಅರಿಯಬಲ್ಲ ಮನಸ್ಸು ಮಾತ್ರವೇ ಘನವಾಗಬಲ್ಲುದು. ಹಾಗೆ ಆಗುವುದಕ್ಕೂ ಸೂಕ್ಷ್ಮವಾದ ನಮ್ಮ ಮನಸ್ಸಿನ ಬಗ್ಗೆಯೇ ನಮಗೆ ಎಚ್ಚರ ಮೂಡಬೇಕು ಅಲ್ಲವೆ!
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...