Home / ಲೇಖನ / ಇತರೆ / ವಚನ ವಿಚಾರ – ಕಿರಿದು ಹಿರಿದು

ವಚನ ವಿಚಾರ – ಕಿರಿದು ಹಿರಿದು

ಕರಿ ಘನ ಅಂಕುಶ ಕಿರಿದೆನ್ನಬಹುದೆ
ಬಾರದಯ್ಯಾ
ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ
ಬಾರದಯ್ಯಾ
ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ
ಬಾರದಯ್ಯಾ
ಕೂಡಲಸಂಗಮದೇವಾ

[ಕರಿ-ಆನೆ, ಘನ-ದೊಡ್ಡದು, ತಮಂಧ-ಕತ್ತಲು]

ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನು ಗಮನಿಸುವಷ್ಟು ಸುಲಭವಾಗಿ ಸೂಕ್ಷ್ಮವಾದದ್ದನ್ನು ಗಮನಿಸಲಾರದು. ದೊಡ್ಡ ಆನೆ ಕಣ್ಣಿಗೆ ಕಾಣುತ್ತದೆ, ಅದನ್ನು ನಿಯಂತ್ರಿಸುವ ಅಂಕುಶ ಕಾಣುವುದಿಲ್ಲ. ದಟ್ಟವಾದ ಕತ್ತಲು ಮಾತ್ರವೇ ಮುಖ್ಯವಾಗುತ್ತ ಸ್ವಲ್ಪವಾದರೂ ಬೆಳಕು ನೀಡುವ ಹಣತೆ ಗಮನಕ್ಕೆ ಬರುವುದಿಲ್ಲ. ಆಯಾ ಕ್ಷಣದ ಬದುಕಿನ ಜಂಜಡವೇ ಘನವಾಗಿ ಕಾಣುತ್ತ, ಅಂಥ ಜಂಜಡದ ನಡುವೆಯೂ ಉದಾತ್ತವಾದದ್ದನ್ನು ನೆನೆಯಬಲ್ಲ ಮನಸ್ಸು ಗಮನಕ್ಕೆ ಬರುವುದಿಲ್ಲ.

ಮನಸ್ಸು ಮುಖ್ಯವಲ್ಲ, ಮನಸ್ಸಿಗೆ ಇರುವ ಸಾಧ್ಯತೆಗಳು ಮುಖ್ಯವಲ್ಲ, ಮುಖ್ಯವಾದದ್ದು ಏನಿದ್ದರೂ ಸ್ಥೂಲವಾಗಿ ಎಲ್ಲರಿಗೆ ಎದ್ದು ಕಾಣುವಂಥ ಸಂಗತಿಗಳು ಅಷ್ಟೇ ಎಂಬ ಮನೋಧರ್ಮ ನಮ್ಮ ಕಾಲದಲ್ಲಿ ಪ್ರಬಲಿಸುತ್ತಿದೆ. ಆನೆಯ ಅಪಾರವೆನ್ನಿಸುವ ಶಕ್ತಿಯನ್ನು ನಿಯಂತ್ರಿಸುವುದು ಪುಟ್ಟದೆಂದು ತೋರುವ ಅಂಕುಶ. ಕತ್ತಲೆಯನ್ನು ಕರಗಿಸುವುದು ಪುಟ್ಟ ಹಣತೆ. ಮನಸ್ಸು ಅಂಕುಶವೂ ಹೌದು ಬೆಳಕೂ ಹೌದು. ವ್ಯಕ್ತಿಯ ಮತ್ತು ಸಮಾಜದ ದುರಂತಕ್ಕೆ ಕಾರಣವಾಗಬಹುದಾದ ಮರವೆಯನ್ನು ತೊಲಗಿಸುವ ಶಕ್ತಿಯೂ ಹೌದು. ಮನಸ್ಸನ್ನು ಕಿರಿದು ಎಂದು ತಿಳಿದರೆ ನಮ್ಮ ದೊಡ್ಡ ದೊಡ್ಡ ಸಾಧನೆಗಳೆಲ್ಲವೂ ಅರ್ಥಹೀನವಾಗುತ್ತವೆ.

ಈ ವಚನದಲ್ಲಿ ಬಂದಿರುವ `ನಿಮ್ಮ ನೆನೆವ ಮನ’ ಎಂಬ ಮಾತನ್ನು ಬೇರೆ ರೀತಿಯಲ್ಲೂ ಅರ್ಥ ಮಾಡಿಕೊಳ್ಳಬಹುದು. ನಮ್ಮ ಮನಸ್ಸು ಸಾಮಾನ್ಯವಾಗಿ ಕೇವಲ ನಮ್ಮ ಬಗ್ಗೆಯೇ ಯೋಚಿಸುತ್ತಿರುತ್ತದೆ. ನಮ್ಮ ಎಲ್ಲ ಚಿಂತನೆಗಳ ಕೇಂದ್ರ ನಾವೇ! ನಾನು ಎಂಬುದನ್ನು ಬಿಟ್ಟು ಕ್ಷಣಕಾಲವಾದರೂ ನೀನು ಎಂಬುದನ್ನು ಅಂದರೆ ಇನ್ನೊಬ್ಬ ವ್ಯಕ್ತಿ, ಜನಸಮುದಾಯ, ಲೋಕ, ದೇವರು ಇತ್ಯಾದಿ, ಆಲೋಚಿಸ ಬಲ್ಲ ಅರಿಯಬಲ್ಲ ಮನಸ್ಸು ಮಾತ್ರವೇ ಘನವಾಗಬಲ್ಲುದು. ಹಾಗೆ ಆಗುವುದಕ್ಕೂ ಸೂಕ್ಷ್ಮವಾದ ನಮ್ಮ ಮನಸ್ಸಿನ ಬಗ್ಗೆಯೇ ನಮಗೆ ಎಚ್ಚರ ಮೂಡಬೇಕು ಅಲ್ಲವೆ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...