Home / ಲೇಖನ / ಇತರೆ / ವಚನ ವಿಚಾರ – ಕಲಿಯಬಾರದು

ವಚನ ವಿಚಾರ – ಕಲಿಯಬಾರದು

ಕಲಿಯಬಾರದು ಕಲಿತನವನು
ಕಲಿಯಬಾರದು ವಿವೇಕಸಹಜವನು
ಕಲಿಯಬಾರದು ದಾನಗುಣವನು
ಕಲಿಯಬಾರದು ಸತ್ಪಥವನು
ಸಕಳೇಶ್ವರದೇವಾ ನೀ ಕರುಣಿಸಿದಲ್ಲದೆ

[ಕಲಿಯಬಾರದು-ಕಲಿಯಲು ಬಾರದು, ಅಸಾಧ್ಯ]

ಸಕಲೇಶಮಾದರಸನ ವಚನ. ಈ ವಚನದ ಮೊದಲ ನಾಲ್ಕು ಸಾಲುಗಳಲ್ಲಿರುವ `ಕಲಿಯಬಾರದು’ ಎಂಬ ಮಾತನ್ನು ನಿಷೇಧದ ಅರ್ಥದಲ್ಲಿ ನೋಡಬಾರದು. ಕಲಿಯಲು-ಬಾರದು, ಕಲಿಯಲು ಸಾಧ್ಯವಿಲ್ಲ ಎನ್ನುವ ಅರ್ಥವಿದೆ ಅದಕ್ಕೆ ವಚನಗಳಲ್ಲಿ `ಬಾರದು’ ಎಂಬುದು ನಿಷೇಧದ ಅರ್ಥದಲ್ಲಿ ಅಲ್ಲ, ಅಸಾಧ್ಯ ಅನ್ನುವ ಅರ್ಥದಲ್ಲಿ ಬಳಕೆಯಾಗಿದೆ.

ಕಲಿತನ ಅಥವ ಶೌರ್ಯ, ವಿವೇಕ, ಸಹಜತೆ, ದಾನದ ಗುಣ, ಬದುಕಿನ ಒಳ್ಳೆಯ ದಾರಿ ಇವೆಲ್ಲ ಕಲಿಯಲು ಸಾಧ್ಯವಿಲ್ಲದ ಸಂಗತಿಗಳು. ಸ್ವಭಾವಸಹಜವಾಗಿ, ಸಹ-ಜ, ಹುಟ್ಟಿನಿಂದ ಬಂದ ಗುಣಗಳಾಗಿದ್ದರೆ ಇರುತ್ತವೆ, ಇಲ್ಲದಿದ್ದರೆ ಇಲ್ಲ.

ಹಾಗೆ ಸ್ವ-ಭಾವವನ್ನು ಮೀರಲಾಗದ್ದರಿಂದ ಸ್ವ-ಭಾವವೇ ವ್ಯಕ್ತಿಯ ವಿಧಿ. ಬದಲಾಗುವುದಿದ್ದರೆ ಅದು ಸಕಳೇಶ್ವರನ ಕರುಣೆಯಿಂದಷ್ಟೇ ಎನ್ನುತ್ತಾನೆ. ದೊಡ್ಡ ವಾಗ್ವಾದಕ್ಕೆ ಕಾರಣವಾಗಬಲ್ಲ ನಿಲುವು ಇದು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...