Home / ಲೇಖನ / ಇತರೆ / ವಚನ ವಿಚಾರ – ಕಲಿಯಬಾರದು

ವಚನ ವಿಚಾರ – ಕಲಿಯಬಾರದು

ಕಲಿಯಬಾರದು ಕಲಿತನವನು
ಕಲಿಯಬಾರದು ವಿವೇಕಸಹಜವನು
ಕಲಿಯಬಾರದು ದಾನಗುಣವನು
ಕಲಿಯಬಾರದು ಸತ್ಪಥವನು
ಸಕಳೇಶ್ವರದೇವಾ ನೀ ಕರುಣಿಸಿದಲ್ಲದೆ

[ಕಲಿಯಬಾರದು-ಕಲಿಯಲು ಬಾರದು, ಅಸಾಧ್ಯ]

ಸಕಲೇಶಮಾದರಸನ ವಚನ. ಈ ವಚನದ ಮೊದಲ ನಾಲ್ಕು ಸಾಲುಗಳಲ್ಲಿರುವ `ಕಲಿಯಬಾರದು’ ಎಂಬ ಮಾತನ್ನು ನಿಷೇಧದ ಅರ್ಥದಲ್ಲಿ ನೋಡಬಾರದು. ಕಲಿಯಲು-ಬಾರದು, ಕಲಿಯಲು ಸಾಧ್ಯವಿಲ್ಲ ಎನ್ನುವ ಅರ್ಥವಿದೆ ಅದಕ್ಕೆ ವಚನಗಳಲ್ಲಿ `ಬಾರದು’ ಎಂಬುದು ನಿಷೇಧದ ಅರ್ಥದಲ್ಲಿ ಅಲ್ಲ, ಅಸಾಧ್ಯ ಅನ್ನುವ ಅರ್ಥದಲ್ಲಿ ಬಳಕೆಯಾಗಿದೆ.

ಕಲಿತನ ಅಥವ ಶೌರ್ಯ, ವಿವೇಕ, ಸಹಜತೆ, ದಾನದ ಗುಣ, ಬದುಕಿನ ಒಳ್ಳೆಯ ದಾರಿ ಇವೆಲ್ಲ ಕಲಿಯಲು ಸಾಧ್ಯವಿಲ್ಲದ ಸಂಗತಿಗಳು. ಸ್ವಭಾವಸಹಜವಾಗಿ, ಸಹ-ಜ, ಹುಟ್ಟಿನಿಂದ ಬಂದ ಗುಣಗಳಾಗಿದ್ದರೆ ಇರುತ್ತವೆ, ಇಲ್ಲದಿದ್ದರೆ ಇಲ್ಲ.

ಹಾಗೆ ಸ್ವ-ಭಾವವನ್ನು ಮೀರಲಾಗದ್ದರಿಂದ ಸ್ವ-ಭಾವವೇ ವ್ಯಕ್ತಿಯ ವಿಧಿ. ಬದಲಾಗುವುದಿದ್ದರೆ ಅದು ಸಕಳೇಶ್ವರನ ಕರುಣೆಯಿಂದಷ್ಟೇ ಎನ್ನುತ್ತಾನೆ. ದೊಡ್ಡ ವಾಗ್ವಾದಕ್ಕೆ ಕಾರಣವಾಗಬಲ್ಲ ನಿಲುವು ಇದು.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...