Home / ಲೇಖನ / ಇತರೆ / ವಚನ ವಿಚಾರ – ಕಲ್ಲಿನಲಿ ಕಠಿಣ

ವಚನ ವಿಚಾರ – ಕಲ್ಲಿನಲಿ ಕಠಿಣ

ಕಲ್ಲಿನಲ್ಲಿ ಕಠಿಣ
ಖುಲ್ಲರಲ್ಲಿ ದುರ್ಗುಣ
ಬಲ್ಲವರಲ್ಲಿ ಸುಗುಣ
ಉಂಟೆಂದೆಲ್ಲರೂ ಬಲ್ಲರು
ಇಂತೀ ಇವು ಎಲ್ಲರ ಗುಣ
ಅಲ್ಲಿಗಲ್ಲಿಗೆ ಸರಿಯೆಂದು ಗೆಲ್ಲ ಸೋಲಕ್ಕೆ ಹೋರದೆ
ನಿಜವೆಲ್ಲಿತ್ತು ಅಲ್ಲಿಯೆ ಸುಖವೆಂದನಂಬಿಗ ಚೌಡಯ್ಯ

[ಖುಲ್ಲರಲ್ಲಿ-ದುಷ್ಟರಲ್ಲಿ]

ಅಂಬಿಗ ಚೌಡಯ್ಯನ ವಚನ. ಕಲ್ಲಿನಲ್ಲಿ ಕಾಠಿಣ್ಯವಿದೆ, ಕೆಟ್ಟವರಲ್ಲಿ ದುರ್ಗುಣ ಇದೆ, ಬಲ್ಲವರಲ್ಲಿ ಸದ್ಗುಣ ಇದೆ ಅನ್ನುವುದು ಎಲ್ಲರಿಗೂ ಗೊತ್ತಲ್ಲವೇ? ಸರಿ ಮತ್ತೆ. ಸರಿ, ತಪ್ಪು ಎಂಬ ಹೋರಾಟವೇಕೆ? ಇರುವ ನಿಜವನ್ನು ಇರುವಂತೆ ಒಪ್ಪಿದಾಗಲೇ ಸುಖ ಅಲ್ಲವೇ?

ಗೆಲ್ಲುವ ಹಟ ಇದೆಯಲ್ಲ ಅದೇ ಸುಖಕ್ಕೆ ತೊಡಕು. ಲೋಕವನ್ನು ಬದಲಾಯಿಸಬೇಕೆಂಬ ಹಟವೂ ಅಷ್ಟೇ. ಎರಡೂ ಹೋರಾಟಗಳೇ. ಹೋರಾಟ ಇದ್ದಾಗ ಸುಖ ಎಲ್ಲಿರುತ್ತದೆ. `ಅಲ್ಲಿಗಲ್ಲಿಗೆ ಸರಿ’ ಇರುವುದೆಲ್ಲ ಇರುವ ಹಾಗೆ ಇದೆ, ಅದೇ ಸತ್ಯ ಎಂದು ಒಪ್ಪಿಕೊಂಡರೆ ಸಾಕು. ಆದರೆ ಅದೇ ಅತ್ಯಂತ ಕಷ್ಟದ ಕೆಲಸವೂ ಹೌದಲ್ಲವೇ? ನಮ್ಮ ಶಿಕ್ಷಣ, ಸಂಸ್ಕೃತಿ, ಧರ್ಮ ಎಲ್ಲವೂ ಇರುವುದನ್ನು ಇನ್ನು ಹೇಗೋ ಮಾಡಲು ಪ್ರಯತ್ನಿಸುವುದನ್ನೇ ಕಲಿಸುತ್ತವೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...