Home / ಲೇಖನ / ಇತರೆ / ವಚನ ವಿಚಾರ – ದುಡ್ಡು ಎಂಬ ನಾಯಿ

ವಚನ ವಿಚಾರ – ದುಡ್ಡು ಎಂಬ ನಾಯಿ

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆವೆನಯ್ಯಾ
ಕಾಂಚನಕ್ಕೆ ವೇಳೆಯಲ್ಲದೆ ಲಿಂಗಕ್ಕೆ ವೇಳೆಯಿಲ್ಲ
ಹಡಿಕೆಗೆ ಮೆಚ್ಚಿದ ಸೊಣಗ ಅಮೃತದ ರುಚಿಯ ಬಲ್ಲುದೆ
ಕೂಡಲಸಂಗಮದೇವಾ

[ಕಾಂಚನ-ಚಿನ್ನ, ಹಡಿಕೆ-ಎಲುಬು, ಸೊಣಗ-ನಾಯಿ]

ಬಸವಣ್ಣನ ವಚನ. ದುಡ್ಡು ಎಂಬ ನಾಯಿಯನ್ನು ನಂಬಿಕೊಂಡು ನಿಮ್ಮನ್ನು ಮರೆತುಬಿಟ್ಟೆ. ದುಡ್ಡು ಎಂಬ ನಾಯಿಗೆ ಗಮನಕೊಡುವುದಕ್ಕೆ ಸಮಯವಿರುತ್ತದೆ, ಆದರೆ ನಿಮ್ಮನ್ನು ನೆನೆಯುವುದಕ್ಕೆ ಸಮಯವೇ ಇಲ್ಲ. ಎಲುಬನ್ನು ಮೆಚ್ಚಿದ ನಾಯಿಗೆ ಅಮೃತದ ರುಚಿ ತಿಳಿಯುವುದೆ?

ಏನನ್ನಾದರೂ ಒಂದನ್ನು ಹಿಡಿದುಕೊಳ್ಳದಿದ್ದರೆ ಮನಸ್ಸಿಗೆ ಸಮಾಧಾನವೇ ಇರುವುದಿಲ್ಲ. ಸುಮ್ಮನಿರುವುದು ಅಸಹನೀಯ ಚಡಪಡಿಕೆಯ ಕೆಲಸ. ಮನಸ್ಸಿಗೆ ಇಷ್ಟವಾದ ಸಂಗತಿ ದೊರೆತಾಗ ಸಮಯ ಸರಿದದ್ದೇ ತಿಳಿಯದು. ನಮಗೂ ಮನಸ್ಸಿಗೂ ಅಂತರವಿದ್ದಾಗ ನಾವು ಬಯಸಿದ್ದನ್ನು ಮನಸ್ಸು ಬಯಸದು. ಹಾಗಾದಾಗ ನಮಗೆ ಇಷ್ಟವಿಲ್ಲದ ಸಂಗತಿಯನ್ನು ಕೀಳಾಗಿ ಕಾಣುವುದೊಂದು ಉಪಾಯ. ಎಂಥವರನ್ನೂ ಸೆಳೆಯುವ ಶಕ್ತಿ ಇದೆಯಲ್ಲಾ ದುಡ್ಡಿಗೆ, ಅದನ್ನು ನಾಯಿ ಎಂದು ಹೀಗಳೆದಾದರೂ ಮನಸ್ಸನ್ನು ದೇವರ ಎಡೆಗೆ ತಿರುಗಿಸುವ ಪ್ರಯತ್ನವೋ ಇದು?

ಅದಕ್ಕಿಂತ ಮಿಗಿಲಾಗಿ ಮನಸ್ಸು ಬಯಸಿದ್ದರಲ್ಲಿ ಮುಳುಗಿ ಹೋದರೆ ವೇಳೆಯ ಅರಿವೂ ವೇಳೆಯ ಮೇಲಿನ ಹತೋಟಿಯೂ ತಪ್ಪಿ ಹೋಗುತ್ತದೆ. ಅಯ್ಯೋ ಸಮಯವೇ ಇಲ್ಲವಲ್ಲಾ ಎಂಬ ಸಬೂಬು ಹೊಳೆಯ ತೊಡಗುತ್ತದೆ.

ಟೈಮೇ ಇಲ್ಲ ಅನ್ನುವ ಮಾತು ನಾವೆಲ್ಲ ಸಾಮಾನ್ಯವಾಗಿ ಹೇಳಿಯೇ ಇರುತ್ತೇವೆ. ಯಾವ ಕೆಲಸಕ್ಕೆ ಟೈಮಿಲ್ಲವೋ ಅದು ನಿಜವಾಗಿ ನಮ್ಮ ಮನಸ್ಸಿಗೆ ಒಗ್ಗದ, ಬೇಡದ ಕೆಲಸ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...