Home / ಲೇಖನ / ಇತರೆ / ವಚನ ವಿಚಾರ – ದುಡ್ಡು ಎಂಬ ನಾಯಿ

ವಚನ ವಿಚಾರ – ದುಡ್ಡು ಎಂಬ ನಾಯಿ

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆವೆನಯ್ಯಾ
ಕಾಂಚನಕ್ಕೆ ವೇಳೆಯಲ್ಲದೆ ಲಿಂಗಕ್ಕೆ ವೇಳೆಯಿಲ್ಲ
ಹಡಿಕೆಗೆ ಮೆಚ್ಚಿದ ಸೊಣಗ ಅಮೃತದ ರುಚಿಯ ಬಲ್ಲುದೆ
ಕೂಡಲಸಂಗಮದೇವಾ

[ಕಾಂಚನ-ಚಿನ್ನ, ಹಡಿಕೆ-ಎಲುಬು, ಸೊಣಗ-ನಾಯಿ]

ಬಸವಣ್ಣನ ವಚನ. ದುಡ್ಡು ಎಂಬ ನಾಯಿಯನ್ನು ನಂಬಿಕೊಂಡು ನಿಮ್ಮನ್ನು ಮರೆತುಬಿಟ್ಟೆ. ದುಡ್ಡು ಎಂಬ ನಾಯಿಗೆ ಗಮನಕೊಡುವುದಕ್ಕೆ ಸಮಯವಿರುತ್ತದೆ, ಆದರೆ ನಿಮ್ಮನ್ನು ನೆನೆಯುವುದಕ್ಕೆ ಸಮಯವೇ ಇಲ್ಲ. ಎಲುಬನ್ನು ಮೆಚ್ಚಿದ ನಾಯಿಗೆ ಅಮೃತದ ರುಚಿ ತಿಳಿಯುವುದೆ?

ಏನನ್ನಾದರೂ ಒಂದನ್ನು ಹಿಡಿದುಕೊಳ್ಳದಿದ್ದರೆ ಮನಸ್ಸಿಗೆ ಸಮಾಧಾನವೇ ಇರುವುದಿಲ್ಲ. ಸುಮ್ಮನಿರುವುದು ಅಸಹನೀಯ ಚಡಪಡಿಕೆಯ ಕೆಲಸ. ಮನಸ್ಸಿಗೆ ಇಷ್ಟವಾದ ಸಂಗತಿ ದೊರೆತಾಗ ಸಮಯ ಸರಿದದ್ದೇ ತಿಳಿಯದು. ನಮಗೂ ಮನಸ್ಸಿಗೂ ಅಂತರವಿದ್ದಾಗ ನಾವು ಬಯಸಿದ್ದನ್ನು ಮನಸ್ಸು ಬಯಸದು. ಹಾಗಾದಾಗ ನಮಗೆ ಇಷ್ಟವಿಲ್ಲದ ಸಂಗತಿಯನ್ನು ಕೀಳಾಗಿ ಕಾಣುವುದೊಂದು ಉಪಾಯ. ಎಂಥವರನ್ನೂ ಸೆಳೆಯುವ ಶಕ್ತಿ ಇದೆಯಲ್ಲಾ ದುಡ್ಡಿಗೆ, ಅದನ್ನು ನಾಯಿ ಎಂದು ಹೀಗಳೆದಾದರೂ ಮನಸ್ಸನ್ನು ದೇವರ ಎಡೆಗೆ ತಿರುಗಿಸುವ ಪ್ರಯತ್ನವೋ ಇದು?

ಅದಕ್ಕಿಂತ ಮಿಗಿಲಾಗಿ ಮನಸ್ಸು ಬಯಸಿದ್ದರಲ್ಲಿ ಮುಳುಗಿ ಹೋದರೆ ವೇಳೆಯ ಅರಿವೂ ವೇಳೆಯ ಮೇಲಿನ ಹತೋಟಿಯೂ ತಪ್ಪಿ ಹೋಗುತ್ತದೆ. ಅಯ್ಯೋ ಸಮಯವೇ ಇಲ್ಲವಲ್ಲಾ ಎಂಬ ಸಬೂಬು ಹೊಳೆಯ ತೊಡಗುತ್ತದೆ.

ಟೈಮೇ ಇಲ್ಲ ಅನ್ನುವ ಮಾತು ನಾವೆಲ್ಲ ಸಾಮಾನ್ಯವಾಗಿ ಹೇಳಿಯೇ ಇರುತ್ತೇವೆ. ಯಾವ ಕೆಲಸಕ್ಕೆ ಟೈಮಿಲ್ಲವೋ ಅದು ನಿಜವಾಗಿ ನಮ್ಮ ಮನಸ್ಸಿಗೆ ಒಗ್ಗದ, ಬೇಡದ ಕೆಲಸ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...