Home / ಲೇಖನ / ಇತರೆ / ವಚನ ವಿಚಾರ – ದುಡ್ಡು ಎಂಬ ನಾಯಿ

ವಚನ ವಿಚಾರ – ದುಡ್ಡು ಎಂಬ ನಾಯಿ

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆವೆನಯ್ಯಾ
ಕಾಂಚನಕ್ಕೆ ವೇಳೆಯಲ್ಲದೆ ಲಿಂಗಕ್ಕೆ ವೇಳೆಯಿಲ್ಲ
ಹಡಿಕೆಗೆ ಮೆಚ್ಚಿದ ಸೊಣಗ ಅಮೃತದ ರುಚಿಯ ಬಲ್ಲುದೆ
ಕೂಡಲಸಂಗಮದೇವಾ

[ಕಾಂಚನ-ಚಿನ್ನ, ಹಡಿಕೆ-ಎಲುಬು, ಸೊಣಗ-ನಾಯಿ]

ಬಸವಣ್ಣನ ವಚನ. ದುಡ್ಡು ಎಂಬ ನಾಯಿಯನ್ನು ನಂಬಿಕೊಂಡು ನಿಮ್ಮನ್ನು ಮರೆತುಬಿಟ್ಟೆ. ದುಡ್ಡು ಎಂಬ ನಾಯಿಗೆ ಗಮನಕೊಡುವುದಕ್ಕೆ ಸಮಯವಿರುತ್ತದೆ, ಆದರೆ ನಿಮ್ಮನ್ನು ನೆನೆಯುವುದಕ್ಕೆ ಸಮಯವೇ ಇಲ್ಲ. ಎಲುಬನ್ನು ಮೆಚ್ಚಿದ ನಾಯಿಗೆ ಅಮೃತದ ರುಚಿ ತಿಳಿಯುವುದೆ?

ಏನನ್ನಾದರೂ ಒಂದನ್ನು ಹಿಡಿದುಕೊಳ್ಳದಿದ್ದರೆ ಮನಸ್ಸಿಗೆ ಸಮಾಧಾನವೇ ಇರುವುದಿಲ್ಲ. ಸುಮ್ಮನಿರುವುದು ಅಸಹನೀಯ ಚಡಪಡಿಕೆಯ ಕೆಲಸ. ಮನಸ್ಸಿಗೆ ಇಷ್ಟವಾದ ಸಂಗತಿ ದೊರೆತಾಗ ಸಮಯ ಸರಿದದ್ದೇ ತಿಳಿಯದು. ನಮಗೂ ಮನಸ್ಸಿಗೂ ಅಂತರವಿದ್ದಾಗ ನಾವು ಬಯಸಿದ್ದನ್ನು ಮನಸ್ಸು ಬಯಸದು. ಹಾಗಾದಾಗ ನಮಗೆ ಇಷ್ಟವಿಲ್ಲದ ಸಂಗತಿಯನ್ನು ಕೀಳಾಗಿ ಕಾಣುವುದೊಂದು ಉಪಾಯ. ಎಂಥವರನ್ನೂ ಸೆಳೆಯುವ ಶಕ್ತಿ ಇದೆಯಲ್ಲಾ ದುಡ್ಡಿಗೆ, ಅದನ್ನು ನಾಯಿ ಎಂದು ಹೀಗಳೆದಾದರೂ ಮನಸ್ಸನ್ನು ದೇವರ ಎಡೆಗೆ ತಿರುಗಿಸುವ ಪ್ರಯತ್ನವೋ ಇದು?

ಅದಕ್ಕಿಂತ ಮಿಗಿಲಾಗಿ ಮನಸ್ಸು ಬಯಸಿದ್ದರಲ್ಲಿ ಮುಳುಗಿ ಹೋದರೆ ವೇಳೆಯ ಅರಿವೂ ವೇಳೆಯ ಮೇಲಿನ ಹತೋಟಿಯೂ ತಪ್ಪಿ ಹೋಗುತ್ತದೆ. ಅಯ್ಯೋ ಸಮಯವೇ ಇಲ್ಲವಲ್ಲಾ ಎಂಬ ಸಬೂಬು ಹೊಳೆಯ ತೊಡಗುತ್ತದೆ.

ಟೈಮೇ ಇಲ್ಲ ಅನ್ನುವ ಮಾತು ನಾವೆಲ್ಲ ಸಾಮಾನ್ಯವಾಗಿ ಹೇಳಿಯೇ ಇರುತ್ತೇವೆ. ಯಾವ ಕೆಲಸಕ್ಕೆ ಟೈಮಿಲ್ಲವೋ ಅದು ನಿಜವಾಗಿ ನಮ್ಮ ಮನಸ್ಸಿಗೆ ಒಗ್ಗದ, ಬೇಡದ ಕೆಲಸ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...