Home / ಲೇಖನ / ಇತರೆ / ವಚನ ವಿಚಾರ – ದುಡ್ಡು ಎಂಬ ನಾಯಿ

ವಚನ ವಿಚಾರ – ದುಡ್ಡು ಎಂಬ ನಾಯಿ

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆವೆನಯ್ಯಾ
ಕಾಂಚನಕ್ಕೆ ವೇಳೆಯಲ್ಲದೆ ಲಿಂಗಕ್ಕೆ ವೇಳೆಯಿಲ್ಲ
ಹಡಿಕೆಗೆ ಮೆಚ್ಚಿದ ಸೊಣಗ ಅಮೃತದ ರುಚಿಯ ಬಲ್ಲುದೆ
ಕೂಡಲಸಂಗಮದೇವಾ

[ಕಾಂಚನ-ಚಿನ್ನ, ಹಡಿಕೆ-ಎಲುಬು, ಸೊಣಗ-ನಾಯಿ]

ಬಸವಣ್ಣನ ವಚನ. ದುಡ್ಡು ಎಂಬ ನಾಯಿಯನ್ನು ನಂಬಿಕೊಂಡು ನಿಮ್ಮನ್ನು ಮರೆತುಬಿಟ್ಟೆ. ದುಡ್ಡು ಎಂಬ ನಾಯಿಗೆ ಗಮನಕೊಡುವುದಕ್ಕೆ ಸಮಯವಿರುತ್ತದೆ, ಆದರೆ ನಿಮ್ಮನ್ನು ನೆನೆಯುವುದಕ್ಕೆ ಸಮಯವೇ ಇಲ್ಲ. ಎಲುಬನ್ನು ಮೆಚ್ಚಿದ ನಾಯಿಗೆ ಅಮೃತದ ರುಚಿ ತಿಳಿಯುವುದೆ?

ಏನನ್ನಾದರೂ ಒಂದನ್ನು ಹಿಡಿದುಕೊಳ್ಳದಿದ್ದರೆ ಮನಸ್ಸಿಗೆ ಸಮಾಧಾನವೇ ಇರುವುದಿಲ್ಲ. ಸುಮ್ಮನಿರುವುದು ಅಸಹನೀಯ ಚಡಪಡಿಕೆಯ ಕೆಲಸ. ಮನಸ್ಸಿಗೆ ಇಷ್ಟವಾದ ಸಂಗತಿ ದೊರೆತಾಗ ಸಮಯ ಸರಿದದ್ದೇ ತಿಳಿಯದು. ನಮಗೂ ಮನಸ್ಸಿಗೂ ಅಂತರವಿದ್ದಾಗ ನಾವು ಬಯಸಿದ್ದನ್ನು ಮನಸ್ಸು ಬಯಸದು. ಹಾಗಾದಾಗ ನಮಗೆ ಇಷ್ಟವಿಲ್ಲದ ಸಂಗತಿಯನ್ನು ಕೀಳಾಗಿ ಕಾಣುವುದೊಂದು ಉಪಾಯ. ಎಂಥವರನ್ನೂ ಸೆಳೆಯುವ ಶಕ್ತಿ ಇದೆಯಲ್ಲಾ ದುಡ್ಡಿಗೆ, ಅದನ್ನು ನಾಯಿ ಎಂದು ಹೀಗಳೆದಾದರೂ ಮನಸ್ಸನ್ನು ದೇವರ ಎಡೆಗೆ ತಿರುಗಿಸುವ ಪ್ರಯತ್ನವೋ ಇದು?

ಅದಕ್ಕಿಂತ ಮಿಗಿಲಾಗಿ ಮನಸ್ಸು ಬಯಸಿದ್ದರಲ್ಲಿ ಮುಳುಗಿ ಹೋದರೆ ವೇಳೆಯ ಅರಿವೂ ವೇಳೆಯ ಮೇಲಿನ ಹತೋಟಿಯೂ ತಪ್ಪಿ ಹೋಗುತ್ತದೆ. ಅಯ್ಯೋ ಸಮಯವೇ ಇಲ್ಲವಲ್ಲಾ ಎಂಬ ಸಬೂಬು ಹೊಳೆಯ ತೊಡಗುತ್ತದೆ.

ಟೈಮೇ ಇಲ್ಲ ಅನ್ನುವ ಮಾತು ನಾವೆಲ್ಲ ಸಾಮಾನ್ಯವಾಗಿ ಹೇಳಿಯೇ ಇರುತ್ತೇವೆ. ಯಾವ ಕೆಲಸಕ್ಕೆ ಟೈಮಿಲ್ಲವೋ ಅದು ನಿಜವಾಗಿ ನಮ್ಮ ಮನಸ್ಸಿಗೆ ಒಗ್ಗದ, ಬೇಡದ ಕೆಲಸ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...