Home / ಲೇಖನ / ಇತರೆ / ವಚನ ವಿಚಾರ – ದುಡ್ಡು ಎಂಬ ನಾಯಿ

ವಚನ ವಿಚಾರ – ದುಡ್ಡು ಎಂಬ ನಾಯಿ

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆವೆನಯ್ಯಾ
ಕಾಂಚನಕ್ಕೆ ವೇಳೆಯಲ್ಲದೆ ಲಿಂಗಕ್ಕೆ ವೇಳೆಯಿಲ್ಲ
ಹಡಿಕೆಗೆ ಮೆಚ್ಚಿದ ಸೊಣಗ ಅಮೃತದ ರುಚಿಯ ಬಲ್ಲುದೆ
ಕೂಡಲಸಂಗಮದೇವಾ

[ಕಾಂಚನ-ಚಿನ್ನ, ಹಡಿಕೆ-ಎಲುಬು, ಸೊಣಗ-ನಾಯಿ]

ಬಸವಣ್ಣನ ವಚನ. ದುಡ್ಡು ಎಂಬ ನಾಯಿಯನ್ನು ನಂಬಿಕೊಂಡು ನಿಮ್ಮನ್ನು ಮರೆತುಬಿಟ್ಟೆ. ದುಡ್ಡು ಎಂಬ ನಾಯಿಗೆ ಗಮನಕೊಡುವುದಕ್ಕೆ ಸಮಯವಿರುತ್ತದೆ, ಆದರೆ ನಿಮ್ಮನ್ನು ನೆನೆಯುವುದಕ್ಕೆ ಸಮಯವೇ ಇಲ್ಲ. ಎಲುಬನ್ನು ಮೆಚ್ಚಿದ ನಾಯಿಗೆ ಅಮೃತದ ರುಚಿ ತಿಳಿಯುವುದೆ?

ಏನನ್ನಾದರೂ ಒಂದನ್ನು ಹಿಡಿದುಕೊಳ್ಳದಿದ್ದರೆ ಮನಸ್ಸಿಗೆ ಸಮಾಧಾನವೇ ಇರುವುದಿಲ್ಲ. ಸುಮ್ಮನಿರುವುದು ಅಸಹನೀಯ ಚಡಪಡಿಕೆಯ ಕೆಲಸ. ಮನಸ್ಸಿಗೆ ಇಷ್ಟವಾದ ಸಂಗತಿ ದೊರೆತಾಗ ಸಮಯ ಸರಿದದ್ದೇ ತಿಳಿಯದು. ನಮಗೂ ಮನಸ್ಸಿಗೂ ಅಂತರವಿದ್ದಾಗ ನಾವು ಬಯಸಿದ್ದನ್ನು ಮನಸ್ಸು ಬಯಸದು. ಹಾಗಾದಾಗ ನಮಗೆ ಇಷ್ಟವಿಲ್ಲದ ಸಂಗತಿಯನ್ನು ಕೀಳಾಗಿ ಕಾಣುವುದೊಂದು ಉಪಾಯ. ಎಂಥವರನ್ನೂ ಸೆಳೆಯುವ ಶಕ್ತಿ ಇದೆಯಲ್ಲಾ ದುಡ್ಡಿಗೆ, ಅದನ್ನು ನಾಯಿ ಎಂದು ಹೀಗಳೆದಾದರೂ ಮನಸ್ಸನ್ನು ದೇವರ ಎಡೆಗೆ ತಿರುಗಿಸುವ ಪ್ರಯತ್ನವೋ ಇದು?

ಅದಕ್ಕಿಂತ ಮಿಗಿಲಾಗಿ ಮನಸ್ಸು ಬಯಸಿದ್ದರಲ್ಲಿ ಮುಳುಗಿ ಹೋದರೆ ವೇಳೆಯ ಅರಿವೂ ವೇಳೆಯ ಮೇಲಿನ ಹತೋಟಿಯೂ ತಪ್ಪಿ ಹೋಗುತ್ತದೆ. ಅಯ್ಯೋ ಸಮಯವೇ ಇಲ್ಲವಲ್ಲಾ ಎಂಬ ಸಬೂಬು ಹೊಳೆಯ ತೊಡಗುತ್ತದೆ.

ಟೈಮೇ ಇಲ್ಲ ಅನ್ನುವ ಮಾತು ನಾವೆಲ್ಲ ಸಾಮಾನ್ಯವಾಗಿ ಹೇಳಿಯೇ ಇರುತ್ತೇವೆ. ಯಾವ ಕೆಲಸಕ್ಕೆ ಟೈಮಿಲ್ಲವೋ ಅದು ನಿಜವಾಗಿ ನಮ್ಮ ಮನಸ್ಸಿಗೆ ಒಗ್ಗದ, ಬೇಡದ ಕೆಲಸ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...