Home / ಲೇಖನ / ಇತರೆ / ವಚನ ವಿಚಾರ – ಕೈಲಾಸ

ವಚನ ವಿಚಾರ – ಕೈಲಾಸ

ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದಡೂ ಮರೆಯಬೇಕು
ಲಿಂಗಪೂಜೆಯಾದಡೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು
ಕಾಯಕವೆ ಕೈಲಾಸವಾದ ಕಾರಣ
ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು

ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮಾತನ್ನು ಹೇಳಿದವ ಆಯ್ದಕ್ಕಿ ಮಾರಯ್ಯ. ಈತ ಕಲ್ಯಾಣದಲ್ಲಿ ನೆಲದ ಮೇಲೆ ಚೆಲ್ಲಿದ ಅಕ್ಕಿಯನ್ನು ಆಯ್ದು ಹೊಟ್ಟೆ ಹೊರೆದುಕೊಳ್ಳುವ ಕಾಯಕ ಮಾಡುತ್ತಿದ್ದನಂತೆ.

ಕಾಯಕವೆಂದರೆ ದೇಹ ಶ್ರಮದ ಕೆಲಸ. ಅದರಿಂದ ಹೊಟ್ಟೆಯ ಪಾಡು ನೋಡಿಕೊಳ್ಳಬೇಕು ಅನ್ನುವ ನಂಬಿಕೆ. ಕಾಯಕ ಎಷ್ಟು ಮುಖ್ಯವೆಂದರೆ ವೀರಶೈವರು ಬಹಳ ಮುಖ್ಯವೆನ್ನುವ ಗುರು ಲಿಂಗ ಜಂಗಮ ಎಲ್ಲವನ್ನೂ ಮರೆಯುವಷ್ಟು ಕಾಯಕದಲ್ಲಿ ಮಗ್ನನಾಗಬೇಕು ಅನ್ನುತ್ತಾನೆ. ದೇವರಿದ್ದರೆ ಅವನೂ ಕಾಯಕದಲ್ಲಿಯೇ ಇರುತ್ತಾನೆ. ಕಾಯಕಕ್ಕಿಂತ ದೊಡ್ಡವನಲ್ಲ.

ದೇಹಶ್ರಮವನ್ನೂ ಆಧ್ಯಾತ್ಮವನ್ನೂ ಸಮೀಕರಿಸುವುದಲ್ಲ, ದಿನನಿತ್ಯದ ಬದುಕಿಗೆ ಅಗತ್ಯವಾಗಿ ಮಾಡಲೇಬೇಕಾದ ಕೆಲಸಕ್ಕಿಂತ ಮಿಗಿಲಾಗದ ಆಧ್ಯಾತ್ಮ ಇಲ್ಲ ಅನ್ನುವ ನಿಲುವು ಇದು.

ಕಾಯಕವೆ ಕೈಲಾಸ ಅನ್ನುವ ಮಾತು `ಕಾಯ ವಿಡಿದಿಹನ್ನಬರ’ ಎಂದು ಆರಂಭವಾಗುವ ಮನಸಂದ ಮಾರಿತಂದೆಯ ವಚನದಲ್ಲೂ ಬರುತ್ತದೆ. ಆಯ್ದಕ್ಕಿ ಮಾರಯ್ಯನ ವಚನವೇ ಸ್ವಲ್ಪ ಬದಲಾವಣೆಯೊಂದಿಗೆ ನಂಜುಂಡ ಶಿವನಲ್ಲೂ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...