Home / ಲೇಖನ / ಇತರೆ / ವಚನ ವಿಚಾರ – ಕೈಲಾಸ

ವಚನ ವಿಚಾರ – ಕೈಲಾಸ

ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದಡೂ ಮರೆಯಬೇಕು
ಲಿಂಗಪೂಜೆಯಾದಡೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು
ಕಾಯಕವೆ ಕೈಲಾಸವಾದ ಕಾರಣ
ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು

ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮಾತನ್ನು ಹೇಳಿದವ ಆಯ್ದಕ್ಕಿ ಮಾರಯ್ಯ. ಈತ ಕಲ್ಯಾಣದಲ್ಲಿ ನೆಲದ ಮೇಲೆ ಚೆಲ್ಲಿದ ಅಕ್ಕಿಯನ್ನು ಆಯ್ದು ಹೊಟ್ಟೆ ಹೊರೆದುಕೊಳ್ಳುವ ಕಾಯಕ ಮಾಡುತ್ತಿದ್ದನಂತೆ.

ಕಾಯಕವೆಂದರೆ ದೇಹ ಶ್ರಮದ ಕೆಲಸ. ಅದರಿಂದ ಹೊಟ್ಟೆಯ ಪಾಡು ನೋಡಿಕೊಳ್ಳಬೇಕು ಅನ್ನುವ ನಂಬಿಕೆ. ಕಾಯಕ ಎಷ್ಟು ಮುಖ್ಯವೆಂದರೆ ವೀರಶೈವರು ಬಹಳ ಮುಖ್ಯವೆನ್ನುವ ಗುರು ಲಿಂಗ ಜಂಗಮ ಎಲ್ಲವನ್ನೂ ಮರೆಯುವಷ್ಟು ಕಾಯಕದಲ್ಲಿ ಮಗ್ನನಾಗಬೇಕು ಅನ್ನುತ್ತಾನೆ. ದೇವರಿದ್ದರೆ ಅವನೂ ಕಾಯಕದಲ್ಲಿಯೇ ಇರುತ್ತಾನೆ. ಕಾಯಕಕ್ಕಿಂತ ದೊಡ್ಡವನಲ್ಲ.

ದೇಹಶ್ರಮವನ್ನೂ ಆಧ್ಯಾತ್ಮವನ್ನೂ ಸಮೀಕರಿಸುವುದಲ್ಲ, ದಿನನಿತ್ಯದ ಬದುಕಿಗೆ ಅಗತ್ಯವಾಗಿ ಮಾಡಲೇಬೇಕಾದ ಕೆಲಸಕ್ಕಿಂತ ಮಿಗಿಲಾಗದ ಆಧ್ಯಾತ್ಮ ಇಲ್ಲ ಅನ್ನುವ ನಿಲುವು ಇದು.

ಕಾಯಕವೆ ಕೈಲಾಸ ಅನ್ನುವ ಮಾತು `ಕಾಯ ವಿಡಿದಿಹನ್ನಬರ’ ಎಂದು ಆರಂಭವಾಗುವ ಮನಸಂದ ಮಾರಿತಂದೆಯ ವಚನದಲ್ಲೂ ಬರುತ್ತದೆ. ಆಯ್ದಕ್ಕಿ ಮಾರಯ್ಯನ ವಚನವೇ ಸ್ವಲ್ಪ ಬದಲಾವಣೆಯೊಂದಿಗೆ ನಂಜುಂಡ ಶಿವನಲ್ಲೂ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ