Home / ಲೇಖನ / ಇತರೆ / ವಚನ ವಿಚಾರ – ಕೈಲಾಸ

ವಚನ ವಿಚಾರ – ಕೈಲಾಸ

ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದಡೂ ಮರೆಯಬೇಕು
ಲಿಂಗಪೂಜೆಯಾದಡೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು
ಕಾಯಕವೆ ಕೈಲಾಸವಾದ ಕಾರಣ
ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು

ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮಾತನ್ನು ಹೇಳಿದವ ಆಯ್ದಕ್ಕಿ ಮಾರಯ್ಯ. ಈತ ಕಲ್ಯಾಣದಲ್ಲಿ ನೆಲದ ಮೇಲೆ ಚೆಲ್ಲಿದ ಅಕ್ಕಿಯನ್ನು ಆಯ್ದು ಹೊಟ್ಟೆ ಹೊರೆದುಕೊಳ್ಳುವ ಕಾಯಕ ಮಾಡುತ್ತಿದ್ದನಂತೆ.

ಕಾಯಕವೆಂದರೆ ದೇಹ ಶ್ರಮದ ಕೆಲಸ. ಅದರಿಂದ ಹೊಟ್ಟೆಯ ಪಾಡು ನೋಡಿಕೊಳ್ಳಬೇಕು ಅನ್ನುವ ನಂಬಿಕೆ. ಕಾಯಕ ಎಷ್ಟು ಮುಖ್ಯವೆಂದರೆ ವೀರಶೈವರು ಬಹಳ ಮುಖ್ಯವೆನ್ನುವ ಗುರು ಲಿಂಗ ಜಂಗಮ ಎಲ್ಲವನ್ನೂ ಮರೆಯುವಷ್ಟು ಕಾಯಕದಲ್ಲಿ ಮಗ್ನನಾಗಬೇಕು ಅನ್ನುತ್ತಾನೆ. ದೇವರಿದ್ದರೆ ಅವನೂ ಕಾಯಕದಲ್ಲಿಯೇ ಇರುತ್ತಾನೆ. ಕಾಯಕಕ್ಕಿಂತ ದೊಡ್ಡವನಲ್ಲ.

ದೇಹಶ್ರಮವನ್ನೂ ಆಧ್ಯಾತ್ಮವನ್ನೂ ಸಮೀಕರಿಸುವುದಲ್ಲ, ದಿನನಿತ್ಯದ ಬದುಕಿಗೆ ಅಗತ್ಯವಾಗಿ ಮಾಡಲೇಬೇಕಾದ ಕೆಲಸಕ್ಕಿಂತ ಮಿಗಿಲಾಗದ ಆಧ್ಯಾತ್ಮ ಇಲ್ಲ ಅನ್ನುವ ನಿಲುವು ಇದು.

ಕಾಯಕವೆ ಕೈಲಾಸ ಅನ್ನುವ ಮಾತು `ಕಾಯ ವಿಡಿದಿಹನ್ನಬರ’ ಎಂದು ಆರಂಭವಾಗುವ ಮನಸಂದ ಮಾರಿತಂದೆಯ ವಚನದಲ್ಲೂ ಬರುತ್ತದೆ. ಆಯ್ದಕ್ಕಿ ಮಾರಯ್ಯನ ವಚನವೇ ಸ್ವಲ್ಪ ಬದಲಾವಣೆಯೊಂದಿಗೆ ನಂಜುಂಡ ಶಿವನಲ್ಲೂ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...