Home / ಲೇಖನ / ಇತರೆ / ವಚನ ವಿಚಾರ – ಕೈಲಾಸ

ವಚನ ವಿಚಾರ – ಕೈಲಾಸ

ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದಡೂ ಮರೆಯಬೇಕು
ಲಿಂಗಪೂಜೆಯಾದಡೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು
ಕಾಯಕವೆ ಕೈಲಾಸವಾದ ಕಾರಣ
ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು

ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮಾತನ್ನು ಹೇಳಿದವ ಆಯ್ದಕ್ಕಿ ಮಾರಯ್ಯ. ಈತ ಕಲ್ಯಾಣದಲ್ಲಿ ನೆಲದ ಮೇಲೆ ಚೆಲ್ಲಿದ ಅಕ್ಕಿಯನ್ನು ಆಯ್ದು ಹೊಟ್ಟೆ ಹೊರೆದುಕೊಳ್ಳುವ ಕಾಯಕ ಮಾಡುತ್ತಿದ್ದನಂತೆ.

ಕಾಯಕವೆಂದರೆ ದೇಹ ಶ್ರಮದ ಕೆಲಸ. ಅದರಿಂದ ಹೊಟ್ಟೆಯ ಪಾಡು ನೋಡಿಕೊಳ್ಳಬೇಕು ಅನ್ನುವ ನಂಬಿಕೆ. ಕಾಯಕ ಎಷ್ಟು ಮುಖ್ಯವೆಂದರೆ ವೀರಶೈವರು ಬಹಳ ಮುಖ್ಯವೆನ್ನುವ ಗುರು ಲಿಂಗ ಜಂಗಮ ಎಲ್ಲವನ್ನೂ ಮರೆಯುವಷ್ಟು ಕಾಯಕದಲ್ಲಿ ಮಗ್ನನಾಗಬೇಕು ಅನ್ನುತ್ತಾನೆ. ದೇವರಿದ್ದರೆ ಅವನೂ ಕಾಯಕದಲ್ಲಿಯೇ ಇರುತ್ತಾನೆ. ಕಾಯಕಕ್ಕಿಂತ ದೊಡ್ಡವನಲ್ಲ.

ದೇಹಶ್ರಮವನ್ನೂ ಆಧ್ಯಾತ್ಮವನ್ನೂ ಸಮೀಕರಿಸುವುದಲ್ಲ, ದಿನನಿತ್ಯದ ಬದುಕಿಗೆ ಅಗತ್ಯವಾಗಿ ಮಾಡಲೇಬೇಕಾದ ಕೆಲಸಕ್ಕಿಂತ ಮಿಗಿಲಾಗದ ಆಧ್ಯಾತ್ಮ ಇಲ್ಲ ಅನ್ನುವ ನಿಲುವು ಇದು.

ಕಾಯಕವೆ ಕೈಲಾಸ ಅನ್ನುವ ಮಾತು `ಕಾಯ ವಿಡಿದಿಹನ್ನಬರ’ ಎಂದು ಆರಂಭವಾಗುವ ಮನಸಂದ ಮಾರಿತಂದೆಯ ವಚನದಲ್ಲೂ ಬರುತ್ತದೆ. ಆಯ್ದಕ್ಕಿ ಮಾರಯ್ಯನ ವಚನವೇ ಸ್ವಲ್ಪ ಬದಲಾವಣೆಯೊಂದಿಗೆ ನಂಜುಂಡ ಶಿವನಲ್ಲೂ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...