Home / ಲೇಖನ / ಇತರೆ / ವಚನ ವಿಚಾರ – ಕೈಲಾಸ

ವಚನ ವಿಚಾರ – ಕೈಲಾಸ

ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದಡೂ ಮರೆಯಬೇಕು
ಲಿಂಗಪೂಜೆಯಾದಡೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು
ಕಾಯಕವೆ ಕೈಲಾಸವಾದ ಕಾರಣ
ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು

ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮಾತನ್ನು ಹೇಳಿದವ ಆಯ್ದಕ್ಕಿ ಮಾರಯ್ಯ. ಈತ ಕಲ್ಯಾಣದಲ್ಲಿ ನೆಲದ ಮೇಲೆ ಚೆಲ್ಲಿದ ಅಕ್ಕಿಯನ್ನು ಆಯ್ದು ಹೊಟ್ಟೆ ಹೊರೆದುಕೊಳ್ಳುವ ಕಾಯಕ ಮಾಡುತ್ತಿದ್ದನಂತೆ.

ಕಾಯಕವೆಂದರೆ ದೇಹ ಶ್ರಮದ ಕೆಲಸ. ಅದರಿಂದ ಹೊಟ್ಟೆಯ ಪಾಡು ನೋಡಿಕೊಳ್ಳಬೇಕು ಅನ್ನುವ ನಂಬಿಕೆ. ಕಾಯಕ ಎಷ್ಟು ಮುಖ್ಯವೆಂದರೆ ವೀರಶೈವರು ಬಹಳ ಮುಖ್ಯವೆನ್ನುವ ಗುರು ಲಿಂಗ ಜಂಗಮ ಎಲ್ಲವನ್ನೂ ಮರೆಯುವಷ್ಟು ಕಾಯಕದಲ್ಲಿ ಮಗ್ನನಾಗಬೇಕು ಅನ್ನುತ್ತಾನೆ. ದೇವರಿದ್ದರೆ ಅವನೂ ಕಾಯಕದಲ್ಲಿಯೇ ಇರುತ್ತಾನೆ. ಕಾಯಕಕ್ಕಿಂತ ದೊಡ್ಡವನಲ್ಲ.

ದೇಹಶ್ರಮವನ್ನೂ ಆಧ್ಯಾತ್ಮವನ್ನೂ ಸಮೀಕರಿಸುವುದಲ್ಲ, ದಿನನಿತ್ಯದ ಬದುಕಿಗೆ ಅಗತ್ಯವಾಗಿ ಮಾಡಲೇಬೇಕಾದ ಕೆಲಸಕ್ಕಿಂತ ಮಿಗಿಲಾಗದ ಆಧ್ಯಾತ್ಮ ಇಲ್ಲ ಅನ್ನುವ ನಿಲುವು ಇದು.

ಕಾಯಕವೆ ಕೈಲಾಸ ಅನ್ನುವ ಮಾತು `ಕಾಯ ವಿಡಿದಿಹನ್ನಬರ’ ಎಂದು ಆರಂಭವಾಗುವ ಮನಸಂದ ಮಾರಿತಂದೆಯ ವಚನದಲ್ಲೂ ಬರುತ್ತದೆ. ಆಯ್ದಕ್ಕಿ ಮಾರಯ್ಯನ ವಚನವೇ ಸ್ವಲ್ಪ ಬದಲಾವಣೆಯೊಂದಿಗೆ ನಂಜುಂಡ ಶಿವನಲ್ಲೂ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...