Home / ಲೇಖನ / ಇತರೆ / ವಚನ ವಿಚಾರ – ಕೈಲಾಸ

ವಚನ ವಿಚಾರ – ಕೈಲಾಸ

ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದಡೂ ಮರೆಯಬೇಕು
ಲಿಂಗಪೂಜೆಯಾದಡೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು
ಕಾಯಕವೆ ಕೈಲಾಸವಾದ ಕಾರಣ
ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು

ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮಾತನ್ನು ಹೇಳಿದವ ಆಯ್ದಕ್ಕಿ ಮಾರಯ್ಯ. ಈತ ಕಲ್ಯಾಣದಲ್ಲಿ ನೆಲದ ಮೇಲೆ ಚೆಲ್ಲಿದ ಅಕ್ಕಿಯನ್ನು ಆಯ್ದು ಹೊಟ್ಟೆ ಹೊರೆದುಕೊಳ್ಳುವ ಕಾಯಕ ಮಾಡುತ್ತಿದ್ದನಂತೆ.

ಕಾಯಕವೆಂದರೆ ದೇಹ ಶ್ರಮದ ಕೆಲಸ. ಅದರಿಂದ ಹೊಟ್ಟೆಯ ಪಾಡು ನೋಡಿಕೊಳ್ಳಬೇಕು ಅನ್ನುವ ನಂಬಿಕೆ. ಕಾಯಕ ಎಷ್ಟು ಮುಖ್ಯವೆಂದರೆ ವೀರಶೈವರು ಬಹಳ ಮುಖ್ಯವೆನ್ನುವ ಗುರು ಲಿಂಗ ಜಂಗಮ ಎಲ್ಲವನ್ನೂ ಮರೆಯುವಷ್ಟು ಕಾಯಕದಲ್ಲಿ ಮಗ್ನನಾಗಬೇಕು ಅನ್ನುತ್ತಾನೆ. ದೇವರಿದ್ದರೆ ಅವನೂ ಕಾಯಕದಲ್ಲಿಯೇ ಇರುತ್ತಾನೆ. ಕಾಯಕಕ್ಕಿಂತ ದೊಡ್ಡವನಲ್ಲ.

ದೇಹಶ್ರಮವನ್ನೂ ಆಧ್ಯಾತ್ಮವನ್ನೂ ಸಮೀಕರಿಸುವುದಲ್ಲ, ದಿನನಿತ್ಯದ ಬದುಕಿಗೆ ಅಗತ್ಯವಾಗಿ ಮಾಡಲೇಬೇಕಾದ ಕೆಲಸಕ್ಕಿಂತ ಮಿಗಿಲಾಗದ ಆಧ್ಯಾತ್ಮ ಇಲ್ಲ ಅನ್ನುವ ನಿಲುವು ಇದು.

ಕಾಯಕವೆ ಕೈಲಾಸ ಅನ್ನುವ ಮಾತು `ಕಾಯ ವಿಡಿದಿಹನ್ನಬರ’ ಎಂದು ಆರಂಭವಾಗುವ ಮನಸಂದ ಮಾರಿತಂದೆಯ ವಚನದಲ್ಲೂ ಬರುತ್ತದೆ. ಆಯ್ದಕ್ಕಿ ಮಾರಯ್ಯನ ವಚನವೇ ಸ್ವಲ್ಪ ಬದಲಾವಣೆಯೊಂದಿಗೆ ನಂಜುಂಡ ಶಿವನಲ್ಲೂ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...