Home / ಲೇಖನ / ಇತರೆ / ವಚನ ವಿಚಾರ – ಕಾಲಿಲ್ಲದ ಕುದುರೆ

ವಚನ ವಿಚಾರ – ಕಾಲಿಲ್ಲದ ಕುದುರೆ

ಕಾಲಿಲ್ಲದ ಕುದುರೆಯೇರಿ ರಾವುತಿಕೆಯ ಮಾಡಬೇಕು
ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು
ಕಾಲಿಲ್ಲದ ಕುದುರೆಯ ಬೀದಿಯಲ್ಲಿ ಕುಣಿಸಾಡಬಲ್ಲಡೆ
ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ
ಆಮುಗೇಶ್ವರಲಿಂಗಕ್ಕೆ ಅಧಿಕನೆಂಬೆ

[ರಾವುತಿಕೆ-ಕುದುರೆಯ ಸವಾರಿ, ಧೀರ-ವಿವೇಕಿ, ಅಧಿಕ-ಹೆಚ್ಚು, ಮಿಗಿಲು]

ಆಮುಗೆ ರಾಯಮ್ಮನ ವಚನ ಇದು. ಇಲ್ಲಿರುವ ಸಂಕೇತ ತೀರ ಸ್ಪಷ್ಟವಾಗಿಯೇ ಇದೆ. ಕುದುರೆಯ ಸವಾರಿ ಕಷ್ಟವಿರಬಹುದು ಆದರೆ ಅಸಾಧ್ಯವಲ್ಲ. ಕಲಿತುಕೊಂಡರೆ ಯಾರು ಬೇಕಾದರೂ ರಾವುತರಾಗಬಹುದು, ಕಲಿತುಕೊಂಡರೆ ಯಾರು ಬೇಕಾದರೂ ಕುದುರೆಯನ್ನು ಕುಣಿಸಬಹುದು. ಓಡುತ್ತಿರುವ ಕುದುರೆಯನ್ನು ನಿಲ್ಲಿಸಲೂಬಹುದು.

ಆದರೆ ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದರ ಸವಾರಿ (ರಾವುತಿಕೆ) ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಆದ್ದರಿಂದಲೇ ಎತ್ತ ಹೋಗುವುದೆಂದು ಅರಿವಾಗದು. ಅದನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದು ನಮ್ಮಿಚ್ಛೆಯಂತೆ ಬೀದಿಯಲ್ಲಿ, ಇತರರಿಗೂ ತಿಳಿಯುವಂತೆ, ಕುಣಿಸಲು ಆಗುವುದಾದರೆ-
ಆಗ ಅಂಥವರನ್ನು ಈ ಲೋಕದ ವೀರರು, ಪರಲೋಕದ ವಿವೇಕಿಗಳು (ಧೀರ-ಧೀ=ವಿವೇಕ, ಬುದ್ಧಿ) ಎನ್ನುತ್ತೇನೆ ಅನ್ನುವುದು ರಾಯಮ್ಮನ ಮಾತು.
ನಾವು ಬಹಳಷ್ಟು ಜನ ಮನಸ್ಸಿನ ಕುದುರೆಯ ಸವಾರರಲ್ಲ, ಕುದುರೆಗೆ ವಶರಾಗಿರುವುದು ಕೂಡ ಗೊತ್ತಿರದಂತೆ ಅದರಿಚ್ಛೆಯಂತೆ ನಡೆಯುತ್ತಾ ಸ್ವತಂತ್ರರೆಂಬ, ಧೀರರೆಂಬ, ವೀರರೆಂಬ ಭ್ರಮೆಯಲ್ಲಿರುವವರು, ಅಲ್ಲವೇ?

ಈ ವಚನದೊಂದಿಗೆ ಅಲ್ಲಮನ ಕೊಟ್ಟ ಕುದುರೆಯನೇರಬಹುದು ಅನ್ನುವ ಸುಪ್ರಸಿದ್ಧವಾದ ವಚನವನ್ನು ಜ್ಞಾಪಿಸಿಕೊಳ್ಳಿ. ಅಲ್ಲೂ ಕುದುರೆಯ ರೂಪಕ ಬಳಕೆಯಾಗಿದೆ, ಬೇರೆಯ ರೀತಿಯಲ್ಲಿ, ಬೇರೆಯ ಉದ್ದೇಶಕ್ಕೆ.
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...