Home / ಲೇಖನ / ಇತರೆ / ವಚನ ವಿಚಾರ – ಕಾಲಿಲ್ಲದ ಕುದುರೆ

ವಚನ ವಿಚಾರ – ಕಾಲಿಲ್ಲದ ಕುದುರೆ

ಕಾಲಿಲ್ಲದ ಕುದುರೆಯೇರಿ ರಾವುತಿಕೆಯ ಮಾಡಬೇಕು
ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು
ಕಾಲಿಲ್ಲದ ಕುದುರೆಯ ಬೀದಿಯಲ್ಲಿ ಕುಣಿಸಾಡಬಲ್ಲಡೆ
ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ
ಆಮುಗೇಶ್ವರಲಿಂಗಕ್ಕೆ ಅಧಿಕನೆಂಬೆ

[ರಾವುತಿಕೆ-ಕುದುರೆಯ ಸವಾರಿ, ಧೀರ-ವಿವೇಕಿ, ಅಧಿಕ-ಹೆಚ್ಚು, ಮಿಗಿಲು]

ಆಮುಗೆ ರಾಯಮ್ಮನ ವಚನ ಇದು. ಇಲ್ಲಿರುವ ಸಂಕೇತ ತೀರ ಸ್ಪಷ್ಟವಾಗಿಯೇ ಇದೆ. ಕುದುರೆಯ ಸವಾರಿ ಕಷ್ಟವಿರಬಹುದು ಆದರೆ ಅಸಾಧ್ಯವಲ್ಲ. ಕಲಿತುಕೊಂಡರೆ ಯಾರು ಬೇಕಾದರೂ ರಾವುತರಾಗಬಹುದು, ಕಲಿತುಕೊಂಡರೆ ಯಾರು ಬೇಕಾದರೂ ಕುದುರೆಯನ್ನು ಕುಣಿಸಬಹುದು. ಓಡುತ್ತಿರುವ ಕುದುರೆಯನ್ನು ನಿಲ್ಲಿಸಲೂಬಹುದು.

ಆದರೆ ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದರ ಸವಾರಿ (ರಾವುತಿಕೆ) ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಆದ್ದರಿಂದಲೇ ಎತ್ತ ಹೋಗುವುದೆಂದು ಅರಿವಾಗದು. ಅದನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದು ನಮ್ಮಿಚ್ಛೆಯಂತೆ ಬೀದಿಯಲ್ಲಿ, ಇತರರಿಗೂ ತಿಳಿಯುವಂತೆ, ಕುಣಿಸಲು ಆಗುವುದಾದರೆ-
ಆಗ ಅಂಥವರನ್ನು ಈ ಲೋಕದ ವೀರರು, ಪರಲೋಕದ ವಿವೇಕಿಗಳು (ಧೀರ-ಧೀ=ವಿವೇಕ, ಬುದ್ಧಿ) ಎನ್ನುತ್ತೇನೆ ಅನ್ನುವುದು ರಾಯಮ್ಮನ ಮಾತು.
ನಾವು ಬಹಳಷ್ಟು ಜನ ಮನಸ್ಸಿನ ಕುದುರೆಯ ಸವಾರರಲ್ಲ, ಕುದುರೆಗೆ ವಶರಾಗಿರುವುದು ಕೂಡ ಗೊತ್ತಿರದಂತೆ ಅದರಿಚ್ಛೆಯಂತೆ ನಡೆಯುತ್ತಾ ಸ್ವತಂತ್ರರೆಂಬ, ಧೀರರೆಂಬ, ವೀರರೆಂಬ ಭ್ರಮೆಯಲ್ಲಿರುವವರು, ಅಲ್ಲವೇ?

ಈ ವಚನದೊಂದಿಗೆ ಅಲ್ಲಮನ ಕೊಟ್ಟ ಕುದುರೆಯನೇರಬಹುದು ಅನ್ನುವ ಸುಪ್ರಸಿದ್ಧವಾದ ವಚನವನ್ನು ಜ್ಞಾಪಿಸಿಕೊಳ್ಳಿ. ಅಲ್ಲೂ ಕುದುರೆಯ ರೂಪಕ ಬಳಕೆಯಾಗಿದೆ, ಬೇರೆಯ ರೀತಿಯಲ್ಲಿ, ಬೇರೆಯ ಉದ್ದೇಶಕ್ಕೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...