Home / ಲೇಖನ / ಇತರೆ / ವಚನ ವಿಚಾರ – ಕಾಲಿಲ್ಲದ ಕುದುರೆ

ವಚನ ವಿಚಾರ – ಕಾಲಿಲ್ಲದ ಕುದುರೆ

ಕಾಲಿಲ್ಲದ ಕುದುರೆಯೇರಿ ರಾವುತಿಕೆಯ ಮಾಡಬೇಕು
ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು
ಕಾಲಿಲ್ಲದ ಕುದುರೆಯ ಬೀದಿಯಲ್ಲಿ ಕುಣಿಸಾಡಬಲ್ಲಡೆ
ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ
ಆಮುಗೇಶ್ವರಲಿಂಗಕ್ಕೆ ಅಧಿಕನೆಂಬೆ

[ರಾವುತಿಕೆ-ಕುದುರೆಯ ಸವಾರಿ, ಧೀರ-ವಿವೇಕಿ, ಅಧಿಕ-ಹೆಚ್ಚು, ಮಿಗಿಲು]

ಆಮುಗೆ ರಾಯಮ್ಮನ ವಚನ ಇದು. ಇಲ್ಲಿರುವ ಸಂಕೇತ ತೀರ ಸ್ಪಷ್ಟವಾಗಿಯೇ ಇದೆ. ಕುದುರೆಯ ಸವಾರಿ ಕಷ್ಟವಿರಬಹುದು ಆದರೆ ಅಸಾಧ್ಯವಲ್ಲ. ಕಲಿತುಕೊಂಡರೆ ಯಾರು ಬೇಕಾದರೂ ರಾವುತರಾಗಬಹುದು, ಕಲಿತುಕೊಂಡರೆ ಯಾರು ಬೇಕಾದರೂ ಕುದುರೆಯನ್ನು ಕುಣಿಸಬಹುದು. ಓಡುತ್ತಿರುವ ಕುದುರೆಯನ್ನು ನಿಲ್ಲಿಸಲೂಬಹುದು.

ಆದರೆ ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದರ ಸವಾರಿ (ರಾವುತಿಕೆ) ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಆದ್ದರಿಂದಲೇ ಎತ್ತ ಹೋಗುವುದೆಂದು ಅರಿವಾಗದು. ಅದನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದು ನಮ್ಮಿಚ್ಛೆಯಂತೆ ಬೀದಿಯಲ್ಲಿ, ಇತರರಿಗೂ ತಿಳಿಯುವಂತೆ, ಕುಣಿಸಲು ಆಗುವುದಾದರೆ-
ಆಗ ಅಂಥವರನ್ನು ಈ ಲೋಕದ ವೀರರು, ಪರಲೋಕದ ವಿವೇಕಿಗಳು (ಧೀರ-ಧೀ=ವಿವೇಕ, ಬುದ್ಧಿ) ಎನ್ನುತ್ತೇನೆ ಅನ್ನುವುದು ರಾಯಮ್ಮನ ಮಾತು.
ನಾವು ಬಹಳಷ್ಟು ಜನ ಮನಸ್ಸಿನ ಕುದುರೆಯ ಸವಾರರಲ್ಲ, ಕುದುರೆಗೆ ವಶರಾಗಿರುವುದು ಕೂಡ ಗೊತ್ತಿರದಂತೆ ಅದರಿಚ್ಛೆಯಂತೆ ನಡೆಯುತ್ತಾ ಸ್ವತಂತ್ರರೆಂಬ, ಧೀರರೆಂಬ, ವೀರರೆಂಬ ಭ್ರಮೆಯಲ್ಲಿರುವವರು, ಅಲ್ಲವೇ?

ಈ ವಚನದೊಂದಿಗೆ ಅಲ್ಲಮನ ಕೊಟ್ಟ ಕುದುರೆಯನೇರಬಹುದು ಅನ್ನುವ ಸುಪ್ರಸಿದ್ಧವಾದ ವಚನವನ್ನು ಜ್ಞಾಪಿಸಿಕೊಳ್ಳಿ. ಅಲ್ಲೂ ಕುದುರೆಯ ರೂಪಕ ಬಳಕೆಯಾಗಿದೆ, ಬೇರೆಯ ರೀತಿಯಲ್ಲಿ, ಬೇರೆಯ ಉದ್ದೇಶಕ್ಕೆ.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...