Home / ಲೇಖನ / ಇತರೆ / ವಚನ ವಿಚಾರ – ಕಾಲಿಲ್ಲದ ಕುದುರೆ

ವಚನ ವಿಚಾರ – ಕಾಲಿಲ್ಲದ ಕುದುರೆ

ಕಾಲಿಲ್ಲದ ಕುದುರೆಯೇರಿ ರಾವುತಿಕೆಯ ಮಾಡಬೇಕು
ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು
ಕಾಲಿಲ್ಲದ ಕುದುರೆಯ ಬೀದಿಯಲ್ಲಿ ಕುಣಿಸಾಡಬಲ್ಲಡೆ
ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ
ಆಮುಗೇಶ್ವರಲಿಂಗಕ್ಕೆ ಅಧಿಕನೆಂಬೆ

[ರಾವುತಿಕೆ-ಕುದುರೆಯ ಸವಾರಿ, ಧೀರ-ವಿವೇಕಿ, ಅಧಿಕ-ಹೆಚ್ಚು, ಮಿಗಿಲು]

ಆಮುಗೆ ರಾಯಮ್ಮನ ವಚನ ಇದು. ಇಲ್ಲಿರುವ ಸಂಕೇತ ತೀರ ಸ್ಪಷ್ಟವಾಗಿಯೇ ಇದೆ. ಕುದುರೆಯ ಸವಾರಿ ಕಷ್ಟವಿರಬಹುದು ಆದರೆ ಅಸಾಧ್ಯವಲ್ಲ. ಕಲಿತುಕೊಂಡರೆ ಯಾರು ಬೇಕಾದರೂ ರಾವುತರಾಗಬಹುದು, ಕಲಿತುಕೊಂಡರೆ ಯಾರು ಬೇಕಾದರೂ ಕುದುರೆಯನ್ನು ಕುಣಿಸಬಹುದು. ಓಡುತ್ತಿರುವ ಕುದುರೆಯನ್ನು ನಿಲ್ಲಿಸಲೂಬಹುದು.

ಆದರೆ ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದರ ಸವಾರಿ (ರಾವುತಿಕೆ) ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಆದ್ದರಿಂದಲೇ ಎತ್ತ ಹೋಗುವುದೆಂದು ಅರಿವಾಗದು. ಅದನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದು ನಮ್ಮಿಚ್ಛೆಯಂತೆ ಬೀದಿಯಲ್ಲಿ, ಇತರರಿಗೂ ತಿಳಿಯುವಂತೆ, ಕುಣಿಸಲು ಆಗುವುದಾದರೆ-
ಆಗ ಅಂಥವರನ್ನು ಈ ಲೋಕದ ವೀರರು, ಪರಲೋಕದ ವಿವೇಕಿಗಳು (ಧೀರ-ಧೀ=ವಿವೇಕ, ಬುದ್ಧಿ) ಎನ್ನುತ್ತೇನೆ ಅನ್ನುವುದು ರಾಯಮ್ಮನ ಮಾತು.
ನಾವು ಬಹಳಷ್ಟು ಜನ ಮನಸ್ಸಿನ ಕುದುರೆಯ ಸವಾರರಲ್ಲ, ಕುದುರೆಗೆ ವಶರಾಗಿರುವುದು ಕೂಡ ಗೊತ್ತಿರದಂತೆ ಅದರಿಚ್ಛೆಯಂತೆ ನಡೆಯುತ್ತಾ ಸ್ವತಂತ್ರರೆಂಬ, ಧೀರರೆಂಬ, ವೀರರೆಂಬ ಭ್ರಮೆಯಲ್ಲಿರುವವರು, ಅಲ್ಲವೇ?

ಈ ವಚನದೊಂದಿಗೆ ಅಲ್ಲಮನ ಕೊಟ್ಟ ಕುದುರೆಯನೇರಬಹುದು ಅನ್ನುವ ಸುಪ್ರಸಿದ್ಧವಾದ ವಚನವನ್ನು ಜ್ಞಾಪಿಸಿಕೊಳ್ಳಿ. ಅಲ್ಲೂ ಕುದುರೆಯ ರೂಪಕ ಬಳಕೆಯಾಗಿದೆ, ಬೇರೆಯ ರೀತಿಯಲ್ಲಿ, ಬೇರೆಯ ಉದ್ದೇಶಕ್ಕೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ