Home / ಲೇಖನ / ಇತರೆ / ವಚನ ವಿಚಾರ – ಕಾಲಿಲ್ಲದ ಕುದುರೆ

ವಚನ ವಿಚಾರ – ಕಾಲಿಲ್ಲದ ಕುದುರೆ

ಕಾಲಿಲ್ಲದ ಕುದುರೆಯೇರಿ ರಾವುತಿಕೆಯ ಮಾಡಬೇಕು
ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು
ಕಾಲಿಲ್ಲದ ಕುದುರೆಯ ಬೀದಿಯಲ್ಲಿ ಕುಣಿಸಾಡಬಲ್ಲಡೆ
ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ
ಆಮುಗೇಶ್ವರಲಿಂಗಕ್ಕೆ ಅಧಿಕನೆಂಬೆ

[ರಾವುತಿಕೆ-ಕುದುರೆಯ ಸವಾರಿ, ಧೀರ-ವಿವೇಕಿ, ಅಧಿಕ-ಹೆಚ್ಚು, ಮಿಗಿಲು]

ಆಮುಗೆ ರಾಯಮ್ಮನ ವಚನ ಇದು. ಇಲ್ಲಿರುವ ಸಂಕೇತ ತೀರ ಸ್ಪಷ್ಟವಾಗಿಯೇ ಇದೆ. ಕುದುರೆಯ ಸವಾರಿ ಕಷ್ಟವಿರಬಹುದು ಆದರೆ ಅಸಾಧ್ಯವಲ್ಲ. ಕಲಿತುಕೊಂಡರೆ ಯಾರು ಬೇಕಾದರೂ ರಾವುತರಾಗಬಹುದು, ಕಲಿತುಕೊಂಡರೆ ಯಾರು ಬೇಕಾದರೂ ಕುದುರೆಯನ್ನು ಕುಣಿಸಬಹುದು. ಓಡುತ್ತಿರುವ ಕುದುರೆಯನ್ನು ನಿಲ್ಲಿಸಲೂಬಹುದು.

ಆದರೆ ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದರ ಸವಾರಿ (ರಾವುತಿಕೆ) ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಆದ್ದರಿಂದಲೇ ಎತ್ತ ಹೋಗುವುದೆಂದು ಅರಿವಾಗದು. ಅದನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದು ನಮ್ಮಿಚ್ಛೆಯಂತೆ ಬೀದಿಯಲ್ಲಿ, ಇತರರಿಗೂ ತಿಳಿಯುವಂತೆ, ಕುಣಿಸಲು ಆಗುವುದಾದರೆ-
ಆಗ ಅಂಥವರನ್ನು ಈ ಲೋಕದ ವೀರರು, ಪರಲೋಕದ ವಿವೇಕಿಗಳು (ಧೀರ-ಧೀ=ವಿವೇಕ, ಬುದ್ಧಿ) ಎನ್ನುತ್ತೇನೆ ಅನ್ನುವುದು ರಾಯಮ್ಮನ ಮಾತು.
ನಾವು ಬಹಳಷ್ಟು ಜನ ಮನಸ್ಸಿನ ಕುದುರೆಯ ಸವಾರರಲ್ಲ, ಕುದುರೆಗೆ ವಶರಾಗಿರುವುದು ಕೂಡ ಗೊತ್ತಿರದಂತೆ ಅದರಿಚ್ಛೆಯಂತೆ ನಡೆಯುತ್ತಾ ಸ್ವತಂತ್ರರೆಂಬ, ಧೀರರೆಂಬ, ವೀರರೆಂಬ ಭ್ರಮೆಯಲ್ಲಿರುವವರು, ಅಲ್ಲವೇ?

ಈ ವಚನದೊಂದಿಗೆ ಅಲ್ಲಮನ ಕೊಟ್ಟ ಕುದುರೆಯನೇರಬಹುದು ಅನ್ನುವ ಸುಪ್ರಸಿದ್ಧವಾದ ವಚನವನ್ನು ಜ್ಞಾಪಿಸಿಕೊಳ್ಳಿ. ಅಲ್ಲೂ ಕುದುರೆಯ ರೂಪಕ ಬಳಕೆಯಾಗಿದೆ, ಬೇರೆಯ ರೀತಿಯಲ್ಲಿ, ಬೇರೆಯ ಉದ್ದೇಶಕ್ಕೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...