Home / ಲೇಖನ / ಇತರೆ / ವಚನ ವಿಚಾರ – ಸಾವು?

ವಚನ ವಿಚಾರ – ಸಾವು?

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು.
ನೋಡಾ ಅಯ್ಯಾ
ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು
ಕಂಭ ಬೆಂದಿತ್ತು ಹಂಸೆ ಹಾರಿತ್ತು
ಗುಹೇಶ್ವರಾ

ಅಲ್ಲಮನ ವಚನ. ಈ ವಚನ ಅನೇಕ ವರ್ಷಗಳ ಹಿಂದೆಯೇ, ಅದು ಅರ್ಥವಾಗುವುದಕ್ಕೆ ಮೊದಲೇ, ಮನಸ್ಸಿನಲ್ಲಿ ಮನೆಮಾಡಿಕೊಂಡ ವಚನ, ಅರ್ಥ ಏನೇ ಇರಲಿ, ಸ್ಪಟಿಕ ಸ್ಪಷ್ಟವಾದ ಚಿತ್ರವೊಂದನ್ನು ಇದು ಕಟ್ಟಿಕೊಡುತ್ತದೆ.

ಒಂದು ಕೆಂಡದ ಬೆಟ್ಟ. ಕೆಂಡದ ಬೆಟ್ಟದ ಮೇಲೆ ಅರಗಿನ ಕಂಭ, ಅರಗಿನ ಕಂಭದ ಮೇಲೆ ಒಂದು ಹಂಸ. ಅರಗಿನ ಕಂಭ ಬೆಂದು ಹೋಯಿತು. ಅದರ ಮೇಲೆ ಕೂತಿದ್ದ ಹಂಸ ಹಾರಿಹೋಯಿತು.

ಈ ವಚನಕ್ಕೆ ಸಾಂಪ್ರದಾಯಿಕವಾಗಿ ಕೆಂಡದ ಗಿರಿ ಎಂದರೆ ಶಿವನೇ ನಾನು ಎಂಬ ಭಾವ, ಅರಗಿನ ಕಂಭ ಎಂದರೆ ಶರಣನ ಭಾವ, ಹಂಸೆ ಎಂದರೆ ಪರಮಹಂಸ ತತ್ವ ಇತ್ಯಾದಿಯಾಗಿ ವಿವರಿಸುವುದುಂಟು.

ಅದನ್ನೆಲ್ಲ ಬಿಟ್ಟರೂ ಈ ವಚನ ಸಾವನ್ನು ಕುರಿತು ಹೇಳುತ್ತಿದೆಯೋ ಅಥವಾ ಸಾವನ್ನು ವಿವರಿಸುವ ನೆಪದಲ್ಲಿ ಬದುಕಿನ ಚಿತ್ರಕೊಡುತ್ತಿದೆಯೋ ನೋಡಿ.

ಹಂಸವನ್ನು ಜೀವವೆಂದೋ ಆತ್ಮವೆಂದೋ ಒಪ್ಪಿಕೊಳ್ಳೋಣ, ದೇಹವೇ ಅರಗಿನ ಕಂಭ, ಇಡೀ ಬದುಕೇ ಕೆಂಡದ ಬೆಟ್ಟ, ಕೆಂಡದ ಬೆಟ್ಟವಾದ್ದರಿಂದ ಪಕ್ವವಾದರೂ, ಆಗದಿದ್ದರೂ; ಜ್ಞಾನಿಯಾದರೂ ಆಗದಿದ್ದರೂ, ಕಂಭ ಕರಗಿಹೋಗುವುದೇ ನಿಶ್ಚಯ. ಹಾಗೆ ದೇಹ ಕರಗಿದಮೇಲೆ ಜೀವ ಎಲ್ಲಿದ್ದೀತು, ಹಾರಿ ಹೋಯಿತು.

ಬದುಕಿನ ಸ್ಥಿತಿಯ, ದೇಹ ಇಲ್ಲವಾಗುವ ಅನಿವಾರ್ಯತೆಯ, ಸಾವಿನ ಅಪರಿಹಾರ್ಯ ಸ್ಥಿತಿಯ ಮಂಡನೆ ಇದು. ಮಾತಿನಲ್ಲಿ ನಾವು ಹೇಳುವಂತೆ `ಸಾವು ಬರುವುದು’ ಅಲ್ಲ, ಜೀವ `ಹೋಗುವುದು’ ಇಲ್ಲಿನ ಚಿತ್ರ. ಅದು ಉರಿದ ಕಂಬದ ಮೇಲಿನಿಂದ ಹಂಸೆ ಹಾರಿದಷ್ಟೇ ಸಹಜ, ಅನಿವಾರ್ಯ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...