Home / ಲೇಖನ / ಇತರೆ / ವಚನ ವಿಚಾರ – ಅಸಹಾಯಕ

ವಚನ ವಿಚಾರ – ಅಸಹಾಯಕ

ಕೆಸರಲ್ಲಿ ಬಿದ್ದ ಬಡಪಶುವಿನಂತೆ
ಆನು ದೆಸೆದೆಸೆಗೆ ಬಾಯಿ ಬಿಡುತ್ತಿದ್ದೇನೆ
ಅಯ್ಯಾ
ಆರೈವವರಿಲ್ಲ
ಅಕಟಕಟಾ ಪಶುವೆಂದೆನ್ನ
ಕೂಡಲ ಸಂಗಮದೇವ
ಕೊಂಬ ಹಿಡಿದೆತ್ತುವನ್ನಕ್ಕ

[ಆನು-ನಾನು, ಆರೈವರಿಲ್ಲ-ಆರೈಕೆಮಾಡುವವರಿಲ್ಲ]

ಬಸವಣ್ಣನ ಈ ವಚನ ಅಸಹಾಯಕತೆಯನ್ನು ಕುರಿತದ್ದು. ಈ ವಚನವನ್ನು ಕುರಿತು ಹೇಳುತ್ತಾ ಸುಜನಾ ಅವರು ಆಡಿದ ಮಾತುಗಳನ್ನು ಮರೆಯಲು ಆಗಿಲ್ಲ.

ಬಸವಣ್ಣ ಇಲ್ಲಿ ತನ್ನನ್ನು ಕೆಸರಿನಲ್ಲಿ ಸಿಕ್ಕಿಕೊಂಡ ಹಸುವಿಗೆ ಹೋಲಿಸಿಕೊಂಡಿದ್ದಾನೆ. ಅಸಹಾಯಕನಾಗಿ, ನನ್ನನ್ನು ಯಾರೂ ಆರೈಕೆ ಮಾಡುವವರಿಲ್ಲ, ವಿಚಾರಿಸುವವರಿಲ್ಲ, ಕೂಡಲಸಂಗಮನೇ ಬಂದು ಕೊಂಬ ಹಿಡಿದು ಎತ್ತಬೇಕು ಅನ್ನುತ್ತಾನೆ. ಸರಿ. ಆದರೆ ಗಮನಿಸಿ ನೋಡಿ. ಸಾಮಾನ್ಯ ಕವಿಯಾಗಿದ್ದರೆ ಕೊನೆಯ ಸಾಲಿಗೆ ಬರುವವೇಳೆಗೆ `ನನ್ನ ಕೈ ಹಿಡಿದು ಎತ್ತುವವರೆಗೆ’ ಅನ್ನಬಹುದಿತ್ತು. ಆದರೆ ಬಸವಣ್ಣ ಇಲ್ಲಿ ಕೇವಲ ಹಸುವಿನ ಹೋಲಿಕೆಯನ್ನು ಬಳಸುತ್ತಿಲ್ಲ, ರೂಪಕವನ್ನು ಬಳಸುತ್ತಿದ್ದಾನೆ. ಅಲ್ಲ, ತಾನೇ ಕೆಸರಿನಲ್ಲಿ ಸಿಕ್ಕಿಬಿದ್ದ ಹಸುವಾಗಿದ್ದಾನೆ. ಅಷ್ಟು ತನ್ಮಯತೆ ಇರುವುದರಿಂದಲೇ ಕೊನೆಯ ಸಾಲಿನಲ್ಲಿ ಕೊಂಬ ಹಿಡಿದೆತ್ತು ಎಂದಿದ್ದಾನೆ. ಇದು ಸುಜನಾ ಅವರು ಕೊಟ್ಟ ವಿವರಣೆ.

ಮಾತಿನಲ್ಲಿ ತನ್ನನ್ನು ಹಸುವಿಗೆ ಹೋಲಿಸಿಕೊಂಡವನು ತಲ್ಲೀನನಾಗಿ ತಾನೇ ಹಸು ಎಂದು ಭಾವಿಸುವಷ್ಟು ತಾದಾತ್ಮ್ಯ ಹೊಂದುವುದು ಇದೆಯಲ್ಲ ಅದು ಅಪರೂಪ. ಕವಿಗೆ ಮತ್ತು ಭಕ್ತನಿಗೆ ಇಬ್ಬರಿಗೂ ಇಂಥ ತಾದಾತ್ಮ್ಯ ಬೇಕು. ಆಗ ಮಾತ್ರ ಮಾತು ಬರಿಯ ಮಾತಾಗಿ ಉಳಿಯದೆ ಶಕ್ತಿಯಾಗುತ್ತದೆ. ಇಂಥ ತಾಕತ್ತು ಇರುವ ವ್ಯಕ್ತಿ ಮಾತ್ರ ನುಡಿದಂತೆ ನಡೆಯುವ ಮಾತು ಆಡಬಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...