Home / ಲೇಖನ / ಇತರೆ / ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ
ನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ

ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು ಬಯಸುತ್ತ, ಆಗಲಿಲ್ಲವೆಂದು ಕೊರಗುತ್ತ ಇರುವ ಪ್ರಾಣಿ. ನನಗೆ ಸಿಕ್ಕ ಕುದುರೆಗಿಂತ ಇನ್ನು ಬೇರೆ ಕುದುರೆ ಸಿಕ್ಕಿದ್ದರೆ ಎಂದು ಬಯಸುತ್ತ, ಅಂಥ ಬಯಕೆಯ ಕುದುರೆ ಸಿಕ್ಕರೆ ಎಂದು ಆಶಿಸಿ ಹಲ್ಲಣವನ್ನು ಬೆನ್ನಮೇಲೆ ಹೊತ್ತು ತಿರುಗುತ್ತ ಇರುತ್ತೇವೆ. ಇದು ವೀರರ ಲಕ್ಷಣವೂ ಅಲ್ಲ, ಧೀರರ ಲಕ್ಷಣವೂ ಅಲ್ಲ.

ತೆಂಗಿನ ಮರ ತಾನು ಹುಣಿಸೆ ಮರವಾಗಬೇಕಿತ್ತು, ಮಲ್ಲಿಗೆ ಗಿಡವಾಗಬೇಕಿತ್ತು ಎಂದು ಬಯಸುತ್ತದೆಯೇ? ನಾವೆಲ್ಲರೂ ಈಗ ಇರುವುದಕ್ಕಿಂತ ಬೇರೆ ಏನೋ ಆಗಬೇಕೆಂದು ಹಂಬಲಿಸುತ್ತ ಅಂಥ ಹಂಬಲದಲ್ಲೇ ಬದುಕನ್ನು ಕಳೆದುಬಿಡುತ್ತೇವಲ್ಲ! ಇಂಥ ಹಂಬಲವೇ ಎಸ್ಕೆಪಿಸಂ ಅಲ್ಲವೆ? ಇರುವ ಸತ್ಯವನ್ನು ಒಪ್ಪಿಕೊಳ್ಳದೆ ಇಷ್ಟವಾಗುವ ಸತ್ಯವನ್ನು, ಪ್ರಿಯವಾಗುವ ಸತ್ಯವನ್ನು ಬರಿದೇ ಹುಡುಕುತ್ತ ಬಳಲುತ್ತೇವೆ. ಹಾಗೆ ಬಳಲುವುದೇ ನಮ್ಮ ದೊಡ್ಡಸ್ತಿಕೆ ಎಂದು ಭ್ರಮಿಸುತ್ತೇವೆ. ವೀರರು, ಧೀರರು ಆದವರು ತಮ್ಮ ಸತ್ಯವನ್ನು ಒಪ್ಪಿಕೊಂಡು ತಮ್ಮ ಪಾಲಿಗೆ ಬಂದ ಕುದುರೆಯನ್ನು ಪಳಗಿಸಿಕೊಳ್ಳಬೇಕು ಅಲ್ಲವೆ? ಇದು `ಆಗುವ’ ಇಂಗ್ಲಿಷಿನಲ್ಲಿ ಬಿಕಮಿಂಗ್ ಅನ್ನುತ್ತಾರಲ್ಲ ಆ ತತ್ವವಲ್ಲ, `ಇರುವ’ ಇಂಗ್ಲಿಶಿನಲ್ಲಿ ಬೀಯಿಂಗ್ ಅನ್ನುವ ತತ್ವ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...