Home / ಲೇಖನ / ಇತರೆ / ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ
ನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ

ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು ಬಯಸುತ್ತ, ಆಗಲಿಲ್ಲವೆಂದು ಕೊರಗುತ್ತ ಇರುವ ಪ್ರಾಣಿ. ನನಗೆ ಸಿಕ್ಕ ಕುದುರೆಗಿಂತ ಇನ್ನು ಬೇರೆ ಕುದುರೆ ಸಿಕ್ಕಿದ್ದರೆ ಎಂದು ಬಯಸುತ್ತ, ಅಂಥ ಬಯಕೆಯ ಕುದುರೆ ಸಿಕ್ಕರೆ ಎಂದು ಆಶಿಸಿ ಹಲ್ಲಣವನ್ನು ಬೆನ್ನಮೇಲೆ ಹೊತ್ತು ತಿರುಗುತ್ತ ಇರುತ್ತೇವೆ. ಇದು ವೀರರ ಲಕ್ಷಣವೂ ಅಲ್ಲ, ಧೀರರ ಲಕ್ಷಣವೂ ಅಲ್ಲ.

ತೆಂಗಿನ ಮರ ತಾನು ಹುಣಿಸೆ ಮರವಾಗಬೇಕಿತ್ತು, ಮಲ್ಲಿಗೆ ಗಿಡವಾಗಬೇಕಿತ್ತು ಎಂದು ಬಯಸುತ್ತದೆಯೇ? ನಾವೆಲ್ಲರೂ ಈಗ ಇರುವುದಕ್ಕಿಂತ ಬೇರೆ ಏನೋ ಆಗಬೇಕೆಂದು ಹಂಬಲಿಸುತ್ತ ಅಂಥ ಹಂಬಲದಲ್ಲೇ ಬದುಕನ್ನು ಕಳೆದುಬಿಡುತ್ತೇವಲ್ಲ! ಇಂಥ ಹಂಬಲವೇ ಎಸ್ಕೆಪಿಸಂ ಅಲ್ಲವೆ? ಇರುವ ಸತ್ಯವನ್ನು ಒಪ್ಪಿಕೊಳ್ಳದೆ ಇಷ್ಟವಾಗುವ ಸತ್ಯವನ್ನು, ಪ್ರಿಯವಾಗುವ ಸತ್ಯವನ್ನು ಬರಿದೇ ಹುಡುಕುತ್ತ ಬಳಲುತ್ತೇವೆ. ಹಾಗೆ ಬಳಲುವುದೇ ನಮ್ಮ ದೊಡ್ಡಸ್ತಿಕೆ ಎಂದು ಭ್ರಮಿಸುತ್ತೇವೆ. ವೀರರು, ಧೀರರು ಆದವರು ತಮ್ಮ ಸತ್ಯವನ್ನು ಒಪ್ಪಿಕೊಂಡು ತಮ್ಮ ಪಾಲಿಗೆ ಬಂದ ಕುದುರೆಯನ್ನು ಪಳಗಿಸಿಕೊಳ್ಳಬೇಕು ಅಲ್ಲವೆ? ಇದು `ಆಗುವ’ ಇಂಗ್ಲಿಷಿನಲ್ಲಿ ಬಿಕಮಿಂಗ್ ಅನ್ನುತ್ತಾರಲ್ಲ ಆ ತತ್ವವಲ್ಲ, `ಇರುವ’ ಇಂಗ್ಲಿಶಿನಲ್ಲಿ ಬೀಯಿಂಗ್ ಅನ್ನುವ ತತ್ವ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...