Home / ಲೇಖನ / ಇತರೆ / ವಚನ ವಿಚಾರ – ಸಂಧಿಸುವುದು ಇಲ್ಲ

ವಚನ ವಿಚಾರ – ಸಂಧಿಸುವುದು ಇಲ್ಲ

ಗಂಧವ ವಾಯು ಕೊಂಬಾಗ
ಅದ ತಂದು ಕೂಡಿದವರಾರು
ನಿಂದ ಮರಕ್ಕೆ ಸುಗಂಧ ಹುಟ್ಟುವಾಗ
ಅದ ಬಂಧಿಸಿ ತಂದು ಇರಿಸಿದವರಾರು
ಅವು ತಮ್ಮ ಅಂಗಸ್ವಭಾವದಂತೆ
ನಿಂದ ನಿಜವೆ ತಾನಾಗಿ
ಅಲ್ಲಿ ಬೇರೊಂದು ಸಂದೇಹವ ಸಂಧಿಸಲಿಲ್ಲ
ಎಂದನಂಬಿಗಚೌಡಯ್ಯ

ಗಾಳಿಯು ಸುಗಂಧವನ್ನು ಕೊಳ್ಳುವಾಗ ಅವೆರಡನ್ನೂ ಕೂಡಿಸಿದವರು ಯಾರು, ಸುಮ್ಮನೆ ಇರುವ ಮರಕ್ಕೆ ಸುಂಗಧ ಮೂಡಿದಾಗ ಅದನ್ನು ಮರದಲ್ಲಿ ಬಂಧಿಸಿಟ್ಟವರು ಯಾರು-ಇಂಥ ಪ್ರಶ್ನೆಗಳನ್ನು ಅನೇಕ ಕವಿಗಳು ಚೆಲುವಾದ ಪದ್ಯಗಳನ್ನಾಗಿಸಿದ್ದು ನಮಗೆಲ್ಲಾ ಗೊತ್ತೇ ಇದೆ.

ಈ ವಚನದಲ್ಲಿ ಅಂಬಿಗರ ಚೌಡಯ್ಯನು ಇಂಥ ಸಂದೇಹಗಳನ್ನು `ಸಂಧಿಸುವುದು ಇಲ್ಲ’, ಹೀಗೆ ಪ್ರಶ್ನಿಸಿಕೊಳ್ಳುವುದೇ ತಪ್ಪು ಅನ್ನುತ್ತಿದ್ದಾನೆ. ಯಾಕೆಂದರೆ ಸುಗಂಧ, ಗಾಳಿ, ಮರ ಇವೆಲ್ಲ ತಮ್ಮ ಸಹಜ ಸ್ವಭಾವಕ್ಕೆ ತಕ್ಕಂತೆ (ಅಂಗಸ್ವಭಾವದಂತೆ) ವರ್ತಿಸುತ್ತಿವೆ. ಅವು ನಿಜವಾಗಿ ಹೇಗಿವೆಯೋ ಹಾಗೇ ಇವೆ, ಹಾಗೇ ವರ್ತಿಸುತ್ತಿವೆ. ಹೀಗಿರುವಾಗ ಇದೆಲ್ಲ ಏಕೆ, ಹೇಗೆ ಎಂದು ಪ್ರಶ್ನೆ ಕೇಳುವುದು ಹುಸಿಯಲ್ಲವೇ ಎಂದು ಚೌಡಯ್ಯ ಕೇಳುತ್ತಿರುವಂತಿದೆ.

ಕವಿಗಳಿಗೆ ವಿಸ್ಮಯವಿರಬೇಕು ನಿಜ. ಆದರೆ ವಿಸ್ಮಯಪಡುವುದೂ ಒಂದು ಚಟವಾಗಬಾರದು ಎಂದು ಎಚ್ಚರಿಸುವಂತಿದೆ ಈ ವಚನ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...