Home / ಕವನ / ಕವಿತೆ / ಗುಜರಾತಿನ ಗಲಭೆಗೆ ದಶಕ

ಗುಜರಾತಿನ ಗಲಭೆಗೆ ದಶಕ

ಹೋಳಿ ಹಬ್ಬ ಬಂದಿದೆ
ರಕ್ತದೋಕುಳಿಯ ಚೆಲ್ಲುತ
ಕೊಚ್ಚಿ ಹಾಕಿದ ಅಸಂಖ್ಯಾತ ಮನುಜರ
ಗುಂಡಿ ಗುಂಡಿಗಳಲ್ಲಿ ಎಸೆದ ಹೆಣ ರಾಶಿ
ಹರಿದ ರಕ್ತಕ್ಕೆ ನೆಲದ ಒಡಲು ಕೆಂಪಾಗಿದೆ

ಅಂದು ಬಲಿಯಾದ ಬಸುರಿಯರು
ಭೂಮಿಗಿನ್ನೂ ಬಾರದ ಹಸುಳೆಯನ್ನು ಸಿಗಿದು
ತ್ರಿಶೂಲಕ್ಕೆ ಸಿಕ್ಕಿಸಿ ಕುಣಿದ
ದೆವ್ವ ಕುಣಿತಕೆ ದಶಕ ಸಂದಿದೆ.

ಸತಿಯ ಚಿತೆಗೆ ನೂಕಿ ಸುಟ್ಟು
ಮಹಾಸತಿಯ ಗುಡಿ ಕಟ್ಟಿದ್ದಾರೆ
ಕನಸುಗಳ ಸುಟ್ಟ ಘಮಟು ವಾಸನೆ
ಗೊಬ್ಬರ ಸಾಲು ಸಸಿಗೆ ಪಾತಿ ಮಾಡಿ
ಒತ್ತೊತ್ತು ಕನಸು, ಮುಳ್ಳು ಬೇಲಿಗಳ ಕಿತ್ತು.

ಗುಜರಾತಿನ ಗಾಂಧಿಯ ಚರಕ
ನೂಲು ನೇಯುತ್ತಲೇ ಇದೆ ಇಂದಿಗೂ
ಶಾಂತಿ ಮಂತ್ರ ಜಪಿಸುತ್ತಲೇ ಇದೆ
ಪ್ರಗತಿಯ ಮಂತ್ರ ತಂತ್ರಗಳ ಹೇಳುತ್ತ
ನಿಷ್ಪಾಪಿಗಳ ಹತ್ಯೆ ಎಂತಹ ಸಾಧನೆ?

ಸತ್ಯ, ಶಾಂತಿ, ಅಹಿಂಸೆಯ ತತ್ತ್ವ
ಕೆಂಪುರಕ್ತದಲ್ಲಿ ಬಿದ್ದು ಒದ್ದೆಯಾಯ್ತು.
ಅಂಗಳದಲ್ಲಿ ಒಣಹಾಕಿ ಬೀಗಿದೆನು
ಎದುರಾಳಿಯ ಸೊಕ್ಕು ಮುರಿದೆನೆಂದುಕೊಂಡೆನು
ಮನುಜರಿಗೆ ಬೆಂಕಿಯಿಟ್ಟ ಪಾತಕಿಗಳು
ನಡೆದಾಡುತ್ತಿರುವರು ಆ ನಡುಬೀದಿಯಲ್ಲೇ.

ಗುಜರಾತಿನಲ್ಲಿ ಸುಟ್ಟ ಶವಗಳ ಬೂದಿ
ಘಮಟು ವಾಸನೆ ಉಬ್ಬಳಿಕೆ ಬರುತ್ತಿದೆ
ಕ್ರೌರ್ಯದ ಪರಮಾವಧಿಯೊಳಗೆ
ಹೂತು ಹೋಗಿರುವ ಮಾನವೀಯತೆ
ಕೆಂಡವಾರಿದ ಬೂದಿ ಎಲ್ಲಿ ಹಾಕಲಿ?
ಅದು ಕ್ರಾಂತಿ ಬೀಜವಾಗಿ ಮೊಳೆಯಬಹುದೆ?
ಸೈತಾನನ ಸೊಕ್ಕು ಮುರಿಯದಿದ್ದರೆ ನಾನು
ಸತ್ತವರ ಅತ್ಮಗಳ ಎದುರಿಸಲಿ ಹೇಗೆ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...