Home / ಕವನ / ಕವಿತೆ / ಆ ದಿನ ಕಂಡೇ ಕಾಣುತ್ತೇವೆ

ಆ ದಿನ ಕಂಡೇ ಕಾಣುತ್ತೇವೆ

ಎಂತಹ ನಿರಂಕುಶ ಪ್ರಭುತ್ವ
ಮಹಾರಥರ ದರ್ಪದ ಸಿಂಹಾಸನ
ರತ್ನಖಚಿತ ಪ್ರಭುಗಳ ಕಿರೀಟಕ್ಕೆ
ಬರಸಿಡಿಲು ಅಪ್ಪಳಿಸಬಹುದು
ಆ ದಿನ ಕಂಡೇ ಕಾಣುತ್ತೇವೆ.

ಮಣಿ, ಮುಕುಟ ಕಿರೀಟಗಳು
ಮಣ್ಣು ಪಾಲಾದವು, ಪದ್ಮನಾಭನ
ಗುಪ್ತಧನ, ಕನಕ ಬಯಲಾದವು
ಗದ್ದುಗೆಯ ನಂಟು ಕಡೆತನಕವಲ್ಲ
ಸಿಂಹಾಸನಗಳು ನುಚ್ಚು ನೂರಾಗುವ
ಆ ದಿನ ಕಂಡೇ ಕಾಣುತ್ತೇವೆ.

ನಿರ್ಲಜ್ಜ ಸುಳ್ಳು ಭರವಸೆಗಳು
ವರಸೆ ಮಾತುಗಳ ಪರಮಾವಧಿ
ಗದ್ದುಗೆಗಳ ಬೇರು ಅದುರುತ್ತಿವೆ.
ಭೂಮಿ ಮೇಲಿನ ಅರಮನೆಗಳು
ಬೆಂಕಿ ಪೊಟ್ಟಣಗಳಂತೆ ಧಗಧಗನೆ
ಭೀಕರ ಉರಿಯುವ ದೃಶ್ಯದ
ಆ ದಿನ ಕಂಡೇ ಕಾಣುತ್ತೇವೆ.

ಓತಿಕಾಟದಂತೆ ಬಣ್ಣ ಬದಲಿಸುವ
ಇವರ ಬಣ್ಣ ಬಯಲಾಗುತ್ತದೆ.
ಇಲ್ಲಿಯೇ ನಮ್ಮ ನಿಮ್ಮೆಲ್ಲರ ಮುಂದೆಯೇ
ನಿರಾಕರಿಸಲ್ಪಟ್ಟ ಅಪರಾಧಗಳು
ಸಾಬೀತಾಗುತ್ತವೆ ಎಲ್ಲರ ಮುಂದೆಯೇ
ಬೆತ್ತಲಾಗುತ್ತಾರೆ ಅವರು
ಆ ದಿನ ಕಂಡೇ ಕಾಣುತ್ತೇವೆ.

ಪ್ರಭುಗಳ ನೆತ್ತಿಯ ಮೇಲೆ
ಅಪಾಯದ ಕತ್ತಿ ಬೀಸುತ್ತಿದೆ
ಸುಳ್ಳು ಭರವಸೆಗಳು ಛಿದ್ರವಾಗಿ
ಪುಡಿಪುಡಿಯಾದ ಒಪ್ಪಂದಗಳು
ಗಾಳಿಯಲಿ ತರಗೆಲೆಯಾಗಿ ಹಾರುವ
ಆ ದಿನ ಕಂಡೇ ಕಾಣುತ್ತೇವೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...