Home / ಕವನ / ಕವಿತೆ / ಆ ದಿನ ಕಂಡೇ ಕಾಣುತ್ತೇವೆ

ಆ ದಿನ ಕಂಡೇ ಕಾಣುತ್ತೇವೆ

ಎಂತಹ ನಿರಂಕುಶ ಪ್ರಭುತ್ವ
ಮಹಾರಥರ ದರ್ಪದ ಸಿಂಹಾಸನ
ರತ್ನಖಚಿತ ಪ್ರಭುಗಳ ಕಿರೀಟಕ್ಕೆ
ಬರಸಿಡಿಲು ಅಪ್ಪಳಿಸಬಹುದು
ಆ ದಿನ ಕಂಡೇ ಕಾಣುತ್ತೇವೆ.

ಮಣಿ, ಮುಕುಟ ಕಿರೀಟಗಳು
ಮಣ್ಣು ಪಾಲಾದವು, ಪದ್ಮನಾಭನ
ಗುಪ್ತಧನ, ಕನಕ ಬಯಲಾದವು
ಗದ್ದುಗೆಯ ನಂಟು ಕಡೆತನಕವಲ್ಲ
ಸಿಂಹಾಸನಗಳು ನುಚ್ಚು ನೂರಾಗುವ
ಆ ದಿನ ಕಂಡೇ ಕಾಣುತ್ತೇವೆ.

ನಿರ್ಲಜ್ಜ ಸುಳ್ಳು ಭರವಸೆಗಳು
ವರಸೆ ಮಾತುಗಳ ಪರಮಾವಧಿ
ಗದ್ದುಗೆಗಳ ಬೇರು ಅದುರುತ್ತಿವೆ.
ಭೂಮಿ ಮೇಲಿನ ಅರಮನೆಗಳು
ಬೆಂಕಿ ಪೊಟ್ಟಣಗಳಂತೆ ಧಗಧಗನೆ
ಭೀಕರ ಉರಿಯುವ ದೃಶ್ಯದ
ಆ ದಿನ ಕಂಡೇ ಕಾಣುತ್ತೇವೆ.

ಓತಿಕಾಟದಂತೆ ಬಣ್ಣ ಬದಲಿಸುವ
ಇವರ ಬಣ್ಣ ಬಯಲಾಗುತ್ತದೆ.
ಇಲ್ಲಿಯೇ ನಮ್ಮ ನಿಮ್ಮೆಲ್ಲರ ಮುಂದೆಯೇ
ನಿರಾಕರಿಸಲ್ಪಟ್ಟ ಅಪರಾಧಗಳು
ಸಾಬೀತಾಗುತ್ತವೆ ಎಲ್ಲರ ಮುಂದೆಯೇ
ಬೆತ್ತಲಾಗುತ್ತಾರೆ ಅವರು
ಆ ದಿನ ಕಂಡೇ ಕಾಣುತ್ತೇವೆ.

ಪ್ರಭುಗಳ ನೆತ್ತಿಯ ಮೇಲೆ
ಅಪಾಯದ ಕತ್ತಿ ಬೀಸುತ್ತಿದೆ
ಸುಳ್ಳು ಭರವಸೆಗಳು ಛಿದ್ರವಾಗಿ
ಪುಡಿಪುಡಿಯಾದ ಒಪ್ಪಂದಗಳು
ಗಾಳಿಯಲಿ ತರಗೆಲೆಯಾಗಿ ಹಾರುವ
ಆ ದಿನ ಕಂಡೇ ಕಾಣುತ್ತೇವೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...