Home / ಕವನ / ಕವಿತೆ / ಕನಸು ಹೊಸೆಯುವಾಸೆ

ಕನಸು ಹೊಸೆಯುವಾಸೆ

ಚೂರಾದ ಕನ್ನಡಿ ಜೋಡಿಸಿ
ಪ್ರತಿಬಿಂಬ ಕಾಣುವ ತವಕ
ಹರಡಿದ ತುಂಡು ಕನಸುಗಳ
ಹರಿದ ಚಿಂದಿಗಳ ಹೊಂದಿಸಿ
ಎಲೆ ಚಂಚಿ ಹೊಲಿಯುವಾಸೆ

ಬಿರಿದ ಹಾಳು ಗೋಡೆಗಳಲ್ಲಿ
ಹುಟ್ಟಿದ ಹುಲ್ಲು ಗರಿಕೆ, ಹುತ್ತಗಳು
ಬೆಳದಿಂಗಳ ಆ ಬಯಲಿನಲಿ
ಲಾಂದ್ರದ ಮಂದ್ರ ಬೆಳಕು
ಚಂದ್ರನಿಗೆ ನಾಚಿಕೆ ಮೂಡಿಸುವಾಸೆ.

ಮೌನದ ಪರದೆಯಲಿ ಏಕಾಂಗಿ
ಕಮಲದ ಮೇಲಣ ಜಲಬಿಂದು
ಪಾರದರ್ಶಕ ಸ್ಪಟಿಕದ ಬೆಳದಿಂಗಳು
ಕನಸು ಚೆಲ್ಲಿದ ನದಿಯ ಹರವು
ಶಬ್ದ ಮಡುತ್ತ ಹರಿಯುವಾಸೆ.

ಹೊಸೆದ ಕನಸುಗಳ ಪೋಣಿಸಿ
ಸೋರಿ ಹೋಗುವ ವಾಸ್ತವಗಳ
ಕತ್ತಲೆಗೆ ಬೆವರುವ ಶಬ್ದಗಳ
ಉಸುಕಿನೊಳಗಿಂದ ಒಸರುವ ನೀರು
ಜೀವಪೋಷಕವಾಗಿ ಹರಿಸುವಾಸೆ.

ಬೇಡವೆಂದರೂ ಕೂಗುತ್ತಿದ್ದ ಸೈರನ್ನು
ಆಗಸದಿಂದ ಸುರಿದ ಆಲಿಕಲ್ಲಿನ
ಹೆಪ್ಪುಗಟ್ಟಿದ್ದ ಕೆಂಪು ರಕ್ತವಿತ್ತು
ವಿನಾಶದ ಸೂಚನೆಯಿತ್ತು
ಮುಚ್ಚಿಟ್ಟ ಗುಟ್ಟು ಬಿಚ್ಚಿ ತೋರಿಸುವಾಸೆ.

ಪರದೆಯ ಹಿಂದಿನ ಅವಳ ಕಣ್ಣು
ಅಮೂರ್ತದ ನೆರಳಿನ ಭಾರ
ಸ್ಮಶಾನದಲ್ಲಿ ಇಟ್ಟ ಹೆಜ್ಜೆಗಳು
ಸುಟ್ಟ ಬಾಗಿಲಿನ ಚೌಕಟ್ಟುಗಳಾಚೆ
ಕರಕಲಾದ ಅವಳ ಕರಳುಗಳ
ತೆರೆದು ಲೋಕಕೆ ತೋರಿಸುವಾಸೆ.

ಮಣ್ಣಿನ ಕಣಕಣದಲ್ಲಿ ಪ್ರತಿರೂಪ
ಅತಂತ್ರದ ಅಹವಾಲುಗಳ ಅಂಗಳದಲ್ಲಿ
ಮರುಜೀವ ಪಡೆದು ನಳನಳಿಸಿದ
ಆಗಸದ ಚುಕ್ಕಿ ತಾರೆಗಳ ಹುಡುಕುತ್ತ
ಸ್ಥಬ್ದ ವೃತ್ತದಲ್ಲಿ ಶಬ್ದ ಮಡುತ್ತ
ನಾಳಿನ ಕನಸುಗಳ ಹೊಸೆಯುವಾಸೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...