Home / ಕವನ / ಕವಿತೆ / ಗಡಿಯಲ್ಲಿ ಕಾವ್ಯ

ಗಡಿಯಲ್ಲಿ ಕಾವ್ಯ

ಸುಮ್ಮನೆ ಬಿದ್ದಿರುವ ಉದ್ದುದ್ದ ಸರಹದ್ದು
ಎತ್ತೆರತ್ತರಕ್ಕೆ ಬೆಳೆದ ದೇವದಾರುಗಳು
ಅಸ್ತಿತ್ವ ಅಲುಗಾಡುವ ಯಾತನೆಗಳ ಮಧ್ಯೆ
ಶಬ್ದ ಮೀರಿದ ಸಂಕಟಗಳ ನುಂಗಿ
ದೀರ್ಘ ಬದುಕಿನ ವಿಷಾದಗಳ ಮರೆತು
ಗುನಿಗುನಿಸಿ ಹಾಡುತ್ತಿದೆ ನೋಡು ಗಡಿಯಲ್ಲಿ
ಸರಹದ್ದುಗಳೇ ಇಲ್ಲದ ಮಹಾಕಾವ್ಯ.

ನನ್ನ ಕಾವ್ಯದ ಒಂದೊಂದು ಅಕ್ಷರವೂ
ನೂರಾರು ಪ್ರತಿಮೆಗಳ ಮೂಡಿಸುತ್ತಲೇ
ಅರ್ಥವಿಲ್ಲದ ಸರಹದ್ದುಗಳ ಅಳಿಸುತ್ತದೆ
ಮಾನವ ಕಾವ್ಯದ ಒಂದೊಂದು ಸ್ವರವೂ
ಅನಂತ ಆಗಸದಲಿ
ಸ್ನೇಹದ ಬಣ್ಣ ಹರಡುತ್ತಿದೆ.
ಸರಹದ್ದುಗಳೇ ಇಲ್ಲದ ಕಾವ್ಯ
ಗುನುಗುನಿಸಿ ಹಾಡುತ್ತಿದೆ.
ಎರಡು ದೇಶಗಳ ಮಧ್ಯೆ ಎಳೆದ ರೇಖೆಗಳನು
ಎಡಬಿಡದೇ ಸುರಿದ ಮಳೆ ಅಳಿಸಬಹುದೆ?
ಗುನುಗುನಿಸಿ ಹಾಡಿದ ನನ್ನ
ಮೇಘ ಮಲ್ಹಾರದ ರಾಗ
ಹೇಗೆ ಮುರಿಯುತ್ತದೆ ನೋಡು
ಗಡಿಗಳ ಗೋಡೆ ಸರಹದ್ದು ಸರಪಳಿಗಳನು
ಲೋಕವೇ ನಿದ್ದೆಯ ತೆಕ್ಕೆಗೆ ಜಾರಿರಲು
ಗಸ್ತು ನಿಂತಿದೆ ನೋಡು ಗಡಿಯಲ್ಲಿ ಕಾವ್ಯ.

ಬೇಕಿಲ್ಲ ಗನ್ನು ಬಂದೂಕು ಮಿಸಾಯಿಲ್ಲು ನನಗೆ
ಹೃದಯ ಬೆಸೆಯುವ ಜೀವಂತ ಕಾವ್ಯವಿದೆಯಲ್ಲ?
ನನ್ನವರ ಹಾಡಿಗೆ ಗಡಿಯಾಚೆಗಿನ
ಅವರೂ ಹಾಡುತ್ತಿದ್ದಾರೆ
ನೋಡು, ನನ್ನವರ ಹೆಜ್ಜೆಯೊಂದಿಗೆ
ಅವರೂ ಕುಣಿಯುತ್ತಿದ್ದಾರೆ
ಹೇಗೆ ಅರಳುತ್ತಿದೆ ನೋಡು ಗಡಿಯಲ್ಲಿ
ನಿರ್ಭಂಧಗಳೇ ಇಲ್ಲದ ಮಾನವ ಕಾವ್ಯ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...