Home / ಕವನ / ಕವಿತೆ / ತಲ್ಲಾಕಿನ ಕತ್ತಿಗಳು

ತಲ್ಲಾಕಿನ ಕತ್ತಿಗಳು

ಅದು ಕೋಟೆಯಂತೆ ಕಟ್ಟಿದ ಗೋಡೆ
ದಪ್ಪ ದಪ್ಪ ಕಪ್ಪು ಕಲ್ಲಿನ ಕೋಟೆ
ಗೋಡೆಯಾಚೆಗೆ ಸ್ವಚ್ಛಂದ ಪಾರಿವಾಳ
ಗೋಡೆಗಳ ಮಧ್ಯ ನಾನು ಸಮಾಧಿ.

ಬದುಕು ಕಬ್ಬಿಣದ ಕಠಿಣ ಹಾದಿ
ಹಿಮಾಲಯದ ಹಿಮನೀರು ನಾನಾದರೆ
ಬಿಸಿನೀರ ಬುಗ್ಗೆಯಂತೆ ಕುದಿವ ನೀರವನು
ಕಿಲುಬುಗಟ್ಟಿದ ಸಂದು ಗೊಂದುಗಳಲ್ಲಿ
ನನಗಿಲ್ಲ ರಕ್ಷಣೆಯ ಭದ್ರ ಬುನಾದಿ.

ಮೂರು ಮಡದಿಯರಿಟ್ಟು
ನಾಲ್ಕನೆಯವಳ ಮೇಲೆ ಕಣ್ಣು ನೆಟ್ಟು
ಆಕಳಿಸಿ ಕಿಟಕಿಯಲ್ಲಿ ಇಣುಕಿದರೂ ಸಾಕು
ಭಯಗೊಂಡು ಚಿಟ್ಟನೆ ಕಿರುಚುತ್ತಾನೆ.
“ಬೇಗಂ ನನ್ನ ಹುಕ್ಕಾ ಎಲ್ಲಿ?
ತಲೆ ಕೆಟ್ಟಿದೆಯಾ ಪರದೆ ಇಳಿ ಬಿಡು.”
ಇಣುಕಿದೆಯಾ ಜೋಕೆ, ತಲ್ಲಾಕಿನ ಕತ್ತಿ
ತೂಗುತ್ತಿದೆ ನೆತ್ತಿ ಮೇಲೆ ಗೊತ್ತಿಲ್ಲವೆ?

ಚಂದ್ರನ ಹಾಲು ಬೆಳದಿಂಗಳಿಲ್ಲ
ವಸಂತನ ಆಗಮನದ ಸಂಭ್ರಮವಿಲ್ಲ
ನಿಷೇಧದ ಗೋಡೆಗಳ ಮಧ್ಯದಿಂದ
ನಿರಾಸೆಯ ಗೂಡಿನ ಬಂಧಿಸಿ ಒಮ್ಮೆ
ಕೊಡವಿ ಕೇಳಿದಳು “ಹೆದರಿಸದಿರು ನನಗೆ
ತಲ್ಲಾಕಿನ ಕತ್ತಿಯನು” ತಿವಿದು.

ಪಹರೆ ಗೋಡೆಗಳ ಕಲ್ಲು ಶಿಥಿಲವಾಯ್ತು
ಸೋತ ನನ್ನ ಕೈಗಳಲ್ಲೀಗ ಶಕ್ತಿ ಸಂಚಾರವಾಯ್ತು
ಬಂಧನ ಕಳಚಿ ತಿರುಗಿ ನಿಂತು ಕೇಳಿತು.
ನಿನಗೆ ಜನ್ಮ ಕೊಟ್ಟ ತಾಯಿ ನಾನು
ಹೆದರಿಸದಿರು ತಲ್ಲಾಕಿನ ಕತ್ತಿಯಿಂದ
ನೀನವಳ ಮಡಿಲ ಕೂಸು ತಾನೇ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...